ADVERTISEMENT

ಕರ್ನಾಟಕ ಹಾಗೂ ಕನ್ನಡಿಗರ ಹಿತ ಕಾಯಲು ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಫೆಬ್ರುವರಿ 2024, 6:31 IST
Last Updated 7 ಫೆಬ್ರುವರಿ 2024, 6:31 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ನವದೆಹಲಿ: ಕರ್ನಾಟಕ ಹಾಗೂ ಕನ್ನಡಿಗರ ಹಿತ ಕಾಪಾಡಲು ನಾವು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ಮಾಡಲು ಇಲ್ಲಿಗೆ ಬಂದ ಅವರು ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದರು.

ನಮ್ಮ ಪ್ರತಿಭಟನೆಗೆ ಕೇಂದ್ರ ಸರ್ಕಾರ ಓಗೊಡುತ್ತದೆ ಎಂದು ನಾವು ಭಾವಿಸಿದ್ದೇವೆ ಎಂದರು.

ADVERTISEMENT

ಬಳಿಕ ಪ್ರತಿಭಟನೆ ನಡೆಯುವ ಜಂತರ್‌ಮಂತರ್‌ಗೆ ಬಂದ ಅವರನ್ನು ಶಾಸಕರು ಹಾಗೂ ಕಾಂಗ್ರೆಸ್‌ ನಾಯಕರು ಸ್ವಾಗತಿಸಿದರು. ಈ ವೇಳೆ ಎದುರುಗೊಂಡ ಶಾಸಕ ಲಕ್ಷ್ಮಣ ಸವದಿ ಅವರಿಗೆ ಹಸ್ತಲಾಘವ ಮಾಡಿ ಭುಜ ತಟ್ಟಿದರು.

ಧರಣಿ ವೇಳೆ ಸಿದ್ದರಾಮಯ್ಯ ಅವರ ಪಕ್ಕವೇ ಸವದಿ ಕುಳಿತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.