ADVERTISEMENT

ಸಂಕಷ್ಟದಲ್ಲಿರುವ ರೈತರಿಗೂ ಪರಿಹಾರ ನೀಡಲು ಚಿಂತನೆ: ಬಿ.ಎಸ್‌.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 7 ಮೇ 2020, 15:35 IST
Last Updated 7 ಮೇ 2020, 15:35 IST
   

ಬೆಂಗಳೂರು: ‘ಸಂಕಷ್ಟದಲ್ಲಿರುವ ರೈತರಿಗೂ ಸರ್ಕಾರದ ಆರ್ಥಿಕ ಪರಿಸ್ಥಿತಿಯ ಇತಿಮಿತಿಯಲ್ಲಿ ಪರಿಹಾರ ನೀಡಲು ಚಿಂತನೆ ನಡೆಸಲಾಗಿದ್ದು, ಸದ್ಯವೇ ಪ್ರಕಟಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ರೈತ ಮುಖಂಡರೊಂದಿಗೆ ಗುರುವಾರ ಸಭೆ ನಡೆಸಿದ ವೇಳೆ ಅವರು ಈ ವಿಷಯ ತಿಳಿಸಿದರು.

‘ಲಾಕ್‌ಡೌನ್‌ನಿಂದ ಹಣ್ಣು, ತರಕಾರಿಗಳಿಗೆ ಬೇಡಿಕೆ ಕುಸಿದಿದೆ. ಸರ್ಕಾರಕ್ಕೆ ಇದೆಲ್ಲವನ್ನೂ ಗಮನಿಸಿ ಪರಿಹಾರ ನೀಡಬೇಕು’ ಎಂದು ರೈತ ಮುಖಂಡರು ಒತ್ತಾಯಿಸಿದರು. ಇದನ್ನೆಲ್ಲ ಪರಿಗಣಿಸುವುದಾಗಿ ಮುಖ್ಯಮಂತ್ರಿ ತಿಳಿಸಿದರು.

ADVERTISEMENT

‘ಲಾಕ್‌ಡೌ‌ನ್ ಅವಧಿಯಲ್ಲೂ ಕೃಷಿ ಮತ್ತು ಪೂರಕ ಚಟುವಟಿಕೆಗಳು ಯಾವುದೇ ಅಡಚಣೆ ಇಲ್ಲದೆ ಮುಂದುವರಿಸಲು ಅನುಮತಿ ನೀಡಲಾಗಿದೆ. ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಕೃಷಿ ಇಲಾಖೆ ಕಚೇರಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ಕೃಷಿ ಪರಿಕರ ಮಾರಾಟ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ’ ಎಂದು ಯಡಿಯೂರಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.