ADVERTISEMENT

ಪಾದರಾಯನಪುರ ಆರೋಪಿಗಳ ಸ್ಥಳಾಂತರಕ್ಕೆ ಸಿದ್ಧತೆ: ಮಳೆ ಅಡ್ಡಿ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2020, 4:43 IST
Last Updated 24 ಏಪ್ರಿಲ್ 2020, 4:43 IST
ರಾಮನಗರ ಜಿಲ್ಲಾ ಕಾರಾಗೃಹ
ರಾಮನಗರ ಜಿಲ್ಲಾ ಕಾರಾಗೃಹ    

ರಾಮನಗರ: ಇಲ್ಲಿನ ಜೈಲಿನಲ್ಲಿ ಇರುವ ಪಾದರಾಯನಪುರ ದಾಂಧಲೆ ಪ್ರಕರಣದ ಆರೋಪಿಗಳನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಮಳೆ ಅಡ್ಡಿಯಾಗಿದೆ.ಸದ್ಯ ಬೆಂಗಳೂರಿ‌ನಲ್ಲಿ ಮಳೆ ಸುರಿಯುತ್ತಿರುವ ಕಾರಣ ವಾತಾವರಣ ನೋಡಿಕೊಂಡು‌, ಮಧ್ಯಾಹ್ನದ ಬಳಿಕ ಸ್ಥಳಾಂತರಿಸಲುಅಧಿಕಾರಿಗಳು ತೀರ್ಮಾನಿಸಿದ್ದಾರೆ.

ರಾಮನಗರ ಡಿಪೊದಿಂದ ಬಂದಿದ್ದ‌ 14 ಬಸ್ ಗಳನ್ನು ವಾಪಸ್ ಡಿಪೊಗೆ ಕಳುಹಿಸಲಾಗಿದೆ.ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಇರುವ 119 ಆರೋಪಿಗಳನ್ನು ಮತ್ತೆ ಬೆಂಗಳೂರಿಗೆ ಸ್ಥಳಾಂತರ ಮಾಡಲು ಸಿದ್ಧತೆ ನಡೆಸಲಾಗಿತ್ತು.

ಬೆಂಗಳೂರಿನ ಪಾದರಾಯನಪುರದಲ್ಲಿ ದಾಂಧಲೆ ನಡೆಸಿದ 121 ಆರೋಪಿಗಳನ್ನು ರಾಮನಗರ ಜೈಲಿಗೆ ಇದೇ 21ರಂದು ಸ್ಥಳಾಂತರ ಮಾಡಲಾಗಿತ್ತು. ಅವರಲ್ಲಿ ಇಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಸೋಂಕಿತರಿಬ್ಬರನ್ನು ಗುರುವಾರ ರಾತ್ರಿಯೇ ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ಸಾಗಿಸಲಾಗಿದೆ.

ADVERTISEMENT

ಉಳಿದವರನ್ನೂ ಹಜ್ ಭವನಕ್ಕೆ ಸ್ಥಳಾಂತರ ಮಾಡುವ ಸಾಧ್ಯತೆ‌ ಇದೆ. ಇದಕ್ಕಾಗಿ ಕೆಎಸ್ ಆರ್ ಟಿಸಿ ರಾಮನಗರ ಘಟಕದ 14 ಬಸ್ಗಳನ್ನು ಬಳಸಿಕೊಳ್ಳಲಾಗುತ್ತಿದೆ. ಈ ಬಸ್ ಗಳು ಈಗಾಗಲೇ ಕಾರಾಗೃಹದ ಮುಂಭಾಗ ನಿಲ್ಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.