ADVERTISEMENT

Ind-Pak Tensions: ಕ್ಯಾಂಪ್ಕೊದಿಂದ ರಕ್ಷಣಾ ನಿಧಿಗೆ ₹ 5 ಕೋಟಿ ದೇಣಿಗೆ

​ಪ್ರಜಾವಾಣಿ ವಾರ್ತೆ
Published 10 ಮೇ 2025, 11:15 IST
Last Updated 10 ಮೇ 2025, 11:15 IST
<div class="paragraphs"><p>ಕ್ಯಾಂಪ್ಕೊ</p></div>

ಕ್ಯಾಂಪ್ಕೊ

   

ಮಂಗಳೂರು: ಇಲ್ಲಿಯ ಕೇಂದ್ರೀಯ ಅಡಿಕೆ ಮತ್ತು ಕೊಕ್ಕೊ ಮಾರುಕಟ್ಟೆ, ಸಂಸ್ಕರಣ ಸಹಕಾರ ನಿಯಮಿತ (ಕ್ಯಾಂಪ್ಕೊ) ರಾಷ್ಟ್ರೀಯ ರಕ್ಷಣಾ ನಿಧಿಗೆ ₹5 ಕೋಟಿ ದೇಣಿಗೆ ನೀಡಿದೆ.

‘ಪೆಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ದೇಶದ ಗಡಿ ರಕ್ಷಣೆಗಾಗಿ ಹೋರಾಡುತ್ತಿರುವ ಯೋಧರಿಗೆ ನೆರವಾಗಲು ಕ್ಯಾಂಪ್ಕೊ ₹5 ಕೋಟಿ ಕೊಡುಗೆ ನೀಡುವ ಮೂಲಕ ರಾಷ್ಟ್ರದ ಹಿತ ಕಾಪಾಡುವಲ್ಲಿ ತನ್ನ ಬದ್ಧತೆಯನ್ನು ತೋರಿಸಿದೆ’ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ. 

ADVERTISEMENT

‘ಕ್ಯಾಂಪ್ಕೊ ಯಾವಾಗಲೂ ರಾಷ್ಟ್ರೀಯ ಹಿತ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಮುಂಚೂಣಿಯಲ್ಲಿರುವ ರೈತರ ಸಹಕಾರಿ ಸಂಸ್ಥೆಯಾಗಿದೆ. ಈ ಹಿಂದೆಯೂ, ನೈಸರ್ಗಿಕ ವಿಕೋಪಗಳು ಮತ್ತು ರಾಷ್ಟ್ರೀಯ ತುರ್ತು ಪರಿಸ್ಥಿತಿಗಳ ಸಮಯದಲ್ಲಿ ನಾವು ಪ್ರಧಾನಮಂತ್ರಿ ಪರಿಹಾರ ನಿಧಿಗೆ ಆರ್ಥಿಕ ಬೆಂಬಲ ನೀಡಿದ್ದೇವೆ. ದೇಶದ ಸಮಸ್ತ ರೈತರು ಒಗ್ಗಟ್ಟನ್ನು ಪ್ರದರ್ಶಿಸಿ, ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.