ADVERTISEMENT

ಶಿರಸಿ: ಉಗ್ರ ಸಂಘಟನೆ ನಂಟು, ಯುವಕನ ಬಂಧನ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 19:30 IST
Last Updated 11 ನವೆಂಬರ್ 2020, 19:30 IST
ಬಂಧಿತ ಆರೋಪಿ ಸೈಯ್ಯದ್ ಇದ್ರಿಸ್ ಸಾಬ್ ಮುನ್ನಾ
ಬಂಧಿತ ಆರೋಪಿ ಸೈಯ್ಯದ್ ಇದ್ರಿಸ್ ಸಾಬ್ ಮುನ್ನಾ   

ಶಿರಸಿ: ಪಾಕಿಸ್ತಾನದ ಉಗ್ರ ಸಂಘಟನೆಯೊಂದರ ಜತೆ ನಂಟು ಹೊಂದಿರುವ ಆರೋಪದಡಿ ತಾಲ್ಲೂಕಿನ ಅರೆಕೊಪ್ಪದ ಯುವಕನನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಪಶ್ಚಿಮ ಬಂಗಾಳ ವಿಭಾಗದ ತಂಡ ಬುಧವಾರ ನಸುಕಿನ ಜಾವ ಬಂಧಿಸಿ, ವಿಚಾರಣೆಗೆ ಕರೆದೊಯ್ದಿದೆ.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಇಬ್ರಾಹಿಂ ನಬಿ ಸಾಬ್‌ ಅವರ ಮಗ ಸೈಯ್ಯದ್ ಇದ್ರಿಸ್ ಸಾಬ್ ಮುನ್ನಾ (28) ಬಂಧಿತ. ಈತ ಪಾಕಿಸ್ತಾನದ ಉಗ್ರ ಸಂಘಟನೆಯೊಂದರ ಸದಸ್ಯರೊಂದಿಗೆ ದೂರವಾಣಿ ಸಂಪರ್ಕ ಹೊಂದಿದ್ದ. ಅಲ್ಲದೆ ನಿರಂತರ ವಾಟ್ಸ್‌ಆ್ಯಪ್‌ ಚಾಟಿಂಗ್ ನಡೆಸಿದ್ದ ಎಂಬ ಆರೋಪವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT