ADVERTISEMENT

ಪರಮಶಿವಯ್ಯ ವೀರಶೈವ–ಲಿಂಗಾಯತ ನಿಗಮದ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 20:55 IST
Last Updated 24 ನವೆಂಬರ್ 2020, 20:55 IST
.
.   

ಬೆಂಗಳೂರು: ಕರ್ನಾಟಕ ವೀರಶೈವ–ಲಿಂಗಾಯತ ಅಭಿವೃದ್ಧಿ ನಿಗಮದ ಮೊದಲ ಅಧ್ಯಕ್ಷರನ್ನಾಗಿ ಬಿ.ಎಸ್‌. ಪರಮಶಿವಯ್ಯ ಅವರನ್ನು ನೇಮಿಸಲಾಗಿದೆ.

ಸೋಮವಾರವಷ್ಟೇ ಈ ನಿಗಮ ರಚಿಸಿ ಆದೇಶ ಹೊರಡಿಸಿ, ₹500 ಕೋಟಿ ಅನುದಾನವನ್ನು ನಿಗದಿ ಮಾಡಲಾಗಿತ್ತು. ಅಷ್ಟೇಬೇಗನೆ ಅಧ್ಯಕ್ಷರ ನೇಮಕ ಮಾಡಲಾಗಿದೆ.

ಆರಂಭದಲ್ಲಿ ಶಾಸಕ ವೀರಣ್ಣ ಚರಂತಿಮಠ ಅವರನ್ನು ನೇಮಕ ಮಾಡುವ ಬಗ್ಗೆ ಬಿ.ಎಸ್‌.ಯಡಿಯೂರಪ್ಪ ಅವರು ಒಲವು ಹೊಂದಿದ್ದರು. ಆದರೆ, ಅವರು ನಿರಾಕರಿಸಿದ್ದರಿಂದ ಈ ಹುದ್ದೆ ಪರಮಶಿವಯ್ಯ ಅವರಿಗೆ ಒಲಿದು ಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.