
ಪ್ರಜಾವಾಣಿ ವಾರ್ತೆ
ಬೆಂಗಳೂರು: 2023ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಬಡಗು ತಿಟ್ಟು ಯಕ್ಷಗಾನದ ಗುರು, ಉಡುಪಿಯ ಸಂಜೀವ ಸುವರ್ಣ ಬನ್ನಂಜೆ ಅವರು ಆಯ್ಕೆಯಾಗಿದ್ದಾರೆ. ಐದು ಮಂದಿಗೆ ಗೌರವ ಪ್ರಶಸ್ತಿ ಹಾಗೂ 10 ಮಂದಿಗೆ ಯಕ್ಷ ಸಿರಿ ಪ್ರಶಸ್ತಿ, ನಾಲ್ಕು ಮಂದಿಗೆ ಪುಸ್ತಕ ಬಹುಮಾನ ಪ್ರಶಸ್ತಿ, ಒಬ್ಬರಿಗೆ ದತ್ತಿನಿಧಿ ಪ್ರಶಸ್ತಿಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಘೋಷಿಸಿದೆ.
ತೆಂಕು ತಿಟ್ಟು ಭಾಗವತರಾದ ದಿನೇಶ್ ಅಮ್ಮಣ್ಣಾಯ ಹಾಗೂ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ, ಮೂಡಲಪಾಯ ಭಾಗವತರಾದ ನಾರಾಯಣಪ್ಪ ಎಂ.ಆರ್., ಅರ್ಥಧಾರಿ ಎಂ.ಜಬ್ಬಾರ್ ಸಮೊ ಸಂಪಾಜೆ ಅವರು 2023ನೇ ಸಾಲಿನ ಯಕ್ಷಗಾನ ಅಕಾಡೆಮಿ ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
10 ಮಂದಿ ಯಕ್ಷ ಸಿರಿ ವಾರ್ಷಿಕ ಪ್ರಶಸ್ತಿ ವಿಜೇತರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.