ADVERTISEMENT

ನಾಗಾಲ್ಯಾಂಡ್ ಗಡಿಯಲ್ಲಿ ಅಪಘಾತ: ಬೆಳಗಾವಿ ಯೋಧ ಸಾವು

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 8:45 IST
Last Updated 11 ಜುಲೈ 2021, 8:45 IST
ಅಪಘಾತಕ್ಕೀಡಾದ ವಾಹನ ಮತ್ತು ಮೃತ ಯೋಧ ಮಂಜುನಾಥ ಅಪ್ಪಣ್ಣ ಗೌಡಣ್ಣವರ
ಅಪಘಾತಕ್ಕೀಡಾದ ವಾಹನ ಮತ್ತು ಮೃತ ಯೋಧ ಮಂಜುನಾಥ ಅಪ್ಪಣ್ಣ ಗೌಡಣ್ಣವರ   

ಬೆಳಗಾವಿ: ನಾಗಾಲ್ಯಾಂಡ್ ಗಡಿಯಲ್ಲಿ ಕರ್ತವ್ಯದಲ್ಲಿದ್ದ ಜಿಲ್ಲೆಯ ಯೋಧ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಗೋಕಾಕ ತಾಲ್ಲೂಕಿನ ಕೊಣ್ಣೂರ ಗ್ರಾಮದ ಮಂಜುನಾಥ ಅಪ್ಪಣ್ಣ ಗೌಡಣ್ಣವರ (38) ಮೃತಪಟ್ಟವರು.

ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್‌ನಲ್ಲಿ 18 ವರ್ಷಗಳಿಂದ ಚಾಲಕರಾಗಿ ಕೆಲಸ ಮಾಡುತ್ತಿದ್ದ ಅಪ್ಪಣ್ಣ ಅವರುಗಸ್ತಿನಲ್ಲಿದ್ದ ವೇಳೆ ವಾಹನ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ADVERTISEMENT

ಪಾರ್ಥಿವ ಶರೀರವನ್ನು ಜುಲೈ 12ರಂದು ಗೋವಾ ಮಾರ್ಗವಾಗಿ ಕೊಣ್ಣೂರಿಗೆ ತರಲಾಗುವುದು ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.