ನವದೆಹಲಿ: ರಾಷ್ಟ್ರೀಯ ಹೆದ್ದಾರಿ 367ರ ಪಟ್ಟದಕಲ್ಲು- ಶಿರೂರು ನಡುವಿನ ರಸ್ತೆಯನ್ನು 2 ಲೇನ್ಗೆ ವಿಸ್ತರಿಸಲು ₹ 264.15 ಕೋಟಿ ಮಂಜೂರು ಮಾಡಲಾಗಿದೆ.
ಈ ಕುರಿತು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶುಕ್ರವಾರ ಟ್ವೀಟ್ ಮಾಡಿದ್ದಾರೆ.
ಗಡ್ಕರಿ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೆದ್ದಾರಿ ವಿಸ್ತರಣೆಗೆ ಹಣ ನೀಡಿದ್ದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.