ADVERTISEMENT

ರೈತರ ಎರಡನೇ ಕಂತಿನ ಹಣ ಪಾವತಿ, ₹1.000 ಕೋಟಿ ಬಿಡುಗಡೆ: ಬಿ.ಎಸ್. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 8:28 IST
Last Updated 16 ಜೂನ್ 2020, 8:28 IST
ಚಾಮರಾಜಪೇಟೆಯ ಶಂಕರ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಂಗಳವಾರ ಬೆಳಿಗ್ಗೆ ಭೇಟಿ‌ ನೀಡಿ ಧನ್ವಂತರಿ ಯಾಗದಲ್ಲಿ ಭಾಗವಹಿಸಿದರು.
ಚಾಮರಾಜಪೇಟೆಯ ಶಂಕರ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಂಗಳವಾರ ಬೆಳಿಗ್ಗೆ ಭೇಟಿ‌ ನೀಡಿ ಧನ್ವಂತರಿ ಯಾಗದಲ್ಲಿ ಭಾಗವಹಿಸಿದರು.   

ಬೆಂಗಳೂರು: ಪ್ರತಿ ರೈತರ ಖಾತೆಗಳಿಗೆ ತಲಾ ₹2,000 ಪಾವತಿಸಲು ಸೋಮವಾರ ₹1,000 ಕೋಟಿ ಬಿಡುಗಡೆ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ತಿಳಿಸಿದರು.

ಮಂಗಳವಾರ ನಗರದ ಶಂಕರಮಠದಲ್ಲಿ ಧನ್ವಂತ್ರಿ ಹೋಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.

ಸುಮಾರು 50 ಲಕ್ಷ ರೈತರಿಗೆ ಇದರ ಪ್ರಯೋಜನ ಸಿಗುತ್ತದೆ. ರಾಜ್ಯದ ಹಣಕಾಸು ಸ್ಥಿತಿ ಅಷ್ಟಾಗಿ ಉತ್ತಮವಿಲ್ಲದೇ ಇದ್ದರೂ ರೈತರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ಕೇಂದ್ರ ಸರ್ಕಾರ ಪ್ರತಿಯೊಬ್ಬ ರೈತನಿಗೆ ಎರಡು ಕಂತುಗಳಲ್ಲಿ ತಲಾ ₹3,000 ರಂತೆ ಒಟ್ಟು ₹6,000 ಮತ್ತು ರಾಜ್ಯ ಸರ್ಕಾರ ₹2,000 ರಂತೆ ಎರಡು ಕಂತುಗಳಲ್ಲಿ ₹4,000 ಪಾವತಿಸಲಾಗುವುದು. ಪ್ರತಿ ರೈತನಿಗೂ ವರ್ಷಕ್ಕೆ ₹10,000 ಸಿಗುತ್ತದೆ ಎಂದರು.

ADVERTISEMENT

ಚಾಮರಾಜಪೇಟೆಯಲ್ಲಿರುವ ಶಂಕರ ಮಠಕ್ಕೆ ಮಂಗಳವಾರ ಬೆಳಿಗ್ಗೆ ಭೇಟಿ‌ ನೀಡಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ 19 ನಿಯಂತ್ರಣ ಉದ್ದೇಶದಿಂದ ಹಮ್ಮಿಕೊಂಡಿದ್ದ ಧನ್ವಂತರಿ ಯಾಗದಲ್ಲಿ ಭಾಗವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.