ಉಡುಪಿ: ಪೇಜಾವರ ಮಠದ ವಿಶ್ವೇಶ ತೀರ್ಥರು ಮುಂಬೈನ ಬೊರಿವಿಲಿ ರೈಲು ನಿಲ್ದಾಣದಿಂದ ಡೊಂಬಿವಲಿ ಪ್ರದೇಶಕ್ಕೆ ಮುಸ್ಲಿಂ ವ್ಯಕ್ತಿಯ ಕಾರಿನಲ್ಲಿ ತೆರಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದ್ದಾರೆ.
‘ಬರೋಡಾದಿಂದ ಬೊರಿವಿಲಿ ರೈಲು ನಿಲ್ದಾಣಕ್ಕೆ ಬಂದಿಳಿದ ಪೇಜಾವರ ಶ್ರೀಗಳನ್ನು ಶರ್ಫುದ್ದೀನ್ ಮಲೀಕ್ ಎಂಬುವರು ಟ್ಯಾಕ್ಸಿಯಲ್ಲಿ ಡೊಂಬಿವಿಲಿಗೆ ಕರೆದೊಯ್ದು, ಶ್ರೀಗಳ ಕೈಕುಲುಕಿ ಬೀಳ್ಕೊಟ್ಟಿದ್ದು ಬಹಳ ವಿಶೇಷವಾಗಿತ್ತು. ವಿವಿಧತೆಯಲ್ಲಿ ಏಕತೆ ಎಂಬ ಭಾರತದ ಸದ್ಗುಣಕ್ಕೆ ಪೇಜಾವರ ಶ್ರೀಗಳು ಅಪ್ಪಟ ರಾಯಭಾರಿ’ ಎಂದು ಯಾಜ್ಞವಲ್ಕ್ಯಎಂಬುವರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದು, ನೂರಾರು ಜನರು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.
ಹಲವು ವರ್ಷಗಳ ಹಿಂದೆ ಪೇಜಾವರ ಶ್ರೀಗಳು ತಮ್ಮ ಕಾರು ಚಾಲಕನನ್ನಾಗಿ ಮುಸ್ಲಿಂ ವ್ಯಕ್ತಿಯನ್ನು ನೇಮಿಸಿಕೊಂಡಿದ್ದರು. 2 ವರ್ಷಗಳ ಹಿಂದೆ ಮಠದಲ್ಲಿ ಇಫ್ತಾರ್ ಕೂಟ ಆಯೋಜಿಸಿ ಸುದ್ದಿಯಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.