ADVERTISEMENT

ಕೋವಿಡ್ ಶೇ 2ಕ್ಕಿಂತ ಹೆಚ್ಚಿದರೆ ಜಿಲ್ಲೆಗಳಲ್ಲಿ ಚಟುವಟಿಕೆ ನಿರ್ಬಂಧ: ಸುಧಾಕರ್

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2021, 20:34 IST
Last Updated 5 ಸೆಪ್ಟೆಂಬರ್ 2021, 20:34 IST
ಕೆ. ಸುಧಾಕರ್
ಕೆ. ಸುಧಾಕರ್   

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿನ ಪ್ರಮಾಣ ಶೇ 2ಕ್ಕಿಂತ ಹೆಚ್ಚುವ ಜಿಲ್ಲೆಗಳಲ್ಲಿ ತಕ್ಷಣವೇ ಚಟುವಟಿಕೆಗಳನ್ನು ನಿರ್ಬಂಧಿಸಬೇಕಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿಯೂ ಈ ವಿಚಾರವನ್ನು ತಿಳಿಸಿದ್ದೇನೆ’ ಎಂದರು.

ಈಗ ಶಿಕ್ಷಣ, ವ್ಯಾಪಾರ ಸೇರಿ ಎಲ್ಲ ಚಟುವಟಿಕೆಗೆ ಅವಕಾಶ ಮಾಡಿ
ಕೊಟ್ಟಿದ್ದೇವೆ. ಸೋಂಕು ಹೆಚ್ಚಿದರೆ ಆ ಜಿಲ್ಲೆಗಳಲ್ಲಿ ಚಟುವಟಿಕೆಗಳನ್ನು ನಿರ್ಬಂಧಿಸಬೇಕಾಗುತ್ತದೆ. ಇದರಿಂದ ಸಂಭವನೀಯ ಕೋವಿಡ್ 3ನೇ ಅಲೆ ತಡೆಯಲು ಸಾಧ್ಯ. ಮೂರನೇ ಅಲೆ ತಡೆಗೆ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.