ADVERTISEMENT

ಇಂದಿರಾಗಾಂಧಿ ಕಷ್ಟದ ಸಮಯದಲ್ಲಿ ಚಿಕ್ಕಮಗಳೂರಿನ ಜನ ಆಶೀರ್ವಾದ ಮಾಡಿದ್ದರು: ಪ್ರಿಯಾಂಕ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2023, 10:06 IST
Last Updated 26 ಏಪ್ರಿಲ್ 2023, 10:06 IST
ಪ್ರಿಯಾಂಕ ಗಾಂಧಿ ವಾದ್ರ
ಪ್ರಿಯಾಂಕ ಗಾಂಧಿ ವಾದ್ರ   

ಚಿಕ್ಕಮಗಳೂರು: 'ನಮ್ಮ ಅಜ್ಜಿ ಇಂದಿರಾಗಾಂಧಿ ಅವರ ಕಷ್ಟಕರ ಸಮಯದಲ್ಲಿ ಈ ಜಿಲ್ಲೆಯ ಜನರು ಆಶೀರ್ವಾದ ಮಾಡಿದ್ದರು. ಈ ಚುನಾವಣೆಯಲ್ಲಿ ಕರ್ನಾಟಕದ ಜನರು ಕಾಂಗ್ರೆಸ್ ಬೆಂಬಲಿಸುತ್ತಾರೆ ಎಂಬ ಪೂರ್ಣ ವಿಶ್ವಾಸ ಇದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ ಹೇಳಿದರು.

ಬಾಳೆಹೊನ್ನೂರಿನ ಕಲಾರಂಗ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಮೂರುವರೆ ವರ್ಷದಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಪ್ರತಿಯೊಂದು ವಿಚಾರದಲ್ಲೂ ಜನರ ವಿಶ್ವಾಸಕ್ಕೆ ಭಂಗ ತಂದಿದೆ. ಜನರ ಸಮಸ್ಯೆಗಳನ್ನು ಆಲಿಸಿಲ್ಲ ಸರ್ಕಾರ ಲೂಟಿಯಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಬಿಜೆಪಿ ಸರ್ಕಾರವು ₹ 1.5ಲಕ್ಷ ಲಕ್ಷ ಕೋಟಿ ಹಣ ಲೂಟಿ ಮಾಡಿದೆ. ಹೀಗೆ ಜಿಎಸ್‌ಟಿ ಹೊರೆ ಹೊರಿಸಿದೆ. ಸುಳ್ಳು ಹೇಳುವ ಮತ್ತು ಲೂಟಿ ಮಾಡುವ ಇಂಥ ಸರ್ಕಾರ ನಿಮಗೆ ಬೇಕೆ ಎಂದು ಪ್ರಶ್ನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.