ADVERTISEMENT

25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜನ ನನ್ನನ್ನು ಗೆಲ್ಲಿಸುತ್ತಾರೆ: ಬನ್ನಿಕೋಡ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2019, 8:49 IST
Last Updated 5 ಡಿಸೆಂಬರ್ 2019, 8:49 IST
   

ಹಿರೇಕೆರೂರು: ಅನ್ಯಾಯ, ಅಕ್ರಮದ ವಿರುದ್ಧ ಮತದಾರರು ಮತ ಚಲಾಯಿಸಿ ನನ್ನನ್ನು 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸುತ್ತಾರೆ ಎಂದು ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬನ್ನಿಕೋಡ ತಿಳಿಸಿದರು.

ಮತಚಲಾಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವಜ್ಞನ ನಾಡಿನಲ್ಲಿ ಕುತಂತ್ರ ರಾಜಕಾರಣ ನಿಲ್ಲಲಿ. ಅನರ್ಹ ಶಾಸಕನನ್ನು ಜೀವನಪರ್ಯಂತ ಅನರ್ಹಗೊಳಿಸಿ ಅವರ ರಾಜಕೀಯ ಜೀವನವನ್ನು ಅಂತ್ಯ ಮಾಡುವ ಶಕ್ತಿ ಮತದಾರರಿಗಿದೆ ಎಂದು ಹೇಳಿದರು.

ಅನರ್ಹ ಶಾಸಕ ಮತ್ತು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲರ ಅನರ್ಹತೆ, ನಡತೆಯೇ ಅವರಿಗೆ ಮುಳುವಾಗಲಿದೆ ಎಂದರು.

ADVERTISEMENT

ಯು‌ಬಿ ಬಣಕಾರ ಹರಕೆಯ ಕುರಿಯಾಗಲಿದ್ದಾರೆ. ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.