ADVERTISEMENT

ಅಂತರರಾಷ್ಟ್ರೀಯ ಮಟ್ಟದವರೆಗೂ ತನಿಖೆ ನಡೆಯಲಿ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2019, 10:06 IST
Last Updated 18 ಆಗಸ್ಟ್ 2019, 10:06 IST
   

ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ‌ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಲು ಜೆಡಿಎಸ್ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದಲ್ಲಿ ನಡೆದಿದೆ ಎನ್ನಲಾದ ಫೋನ್ ಕದ್ದಾಲಿಕೆ ಪ್ರಕರಣವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಿಬಿಐಗೆ ವಹಿಸಿರುವುದಾಗಿ ಭಾನುವಾರ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಸಿಬಿಐ ಮಾತ್ರವಲ್ಲ ಅಂತಾರಾಷ್ಟ್ರೀಯ ಮಟ್ಟದ ನೆರವು ಪಡೆದು ತನಿಖೆ ನಡೆಸಲಿ. ಇದಕ್ಕೆ ಜೆಡಿಎಸ್‌ನ ಸಂಪೂರ್ಣ ಬೆಂಬಲವಿದೆ ಎಂದುಹೇಳಿದ್ದಾರೆ.

ADVERTISEMENT

‘ಹಿಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕಚೇರಿಯಿಂದಲೇ ನಮ್ಮ ಫೋನ್ ಕದ್ದಾಲಿಕೆ ಮಾಡಲು ಸೂಚನೆ ಹೋಗಿದೆ. ಇದೊಂದು ನೀಚ ಕೆಲಸ' ಎಂದು ವಿಶ್ವನಾಥ್ ಆರೋಪಿಸಿದ್ದರು.

ವಿದ್ಯುನ್ಮಾನ ಮಾಧ್ಯಮಗಳ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ, ಕೆಲವು ಎಲೆಕ್ಟ್ರಾನಿಕ್ ಮಾಧ್ಯಮಗಳು ಫೋನ್ ಕದ್ದಾಲಿಕೆ ವಿಷಯದಲ್ಲಿ ನನ್ನ ಹೆಸರನ್ನು ಎಳೆದು ತರುತ್ತಿವೆ‌. ನನ್ನ ಹಾಗೂ ಜನರ ಮಧ್ಯೆ ಅವಿಶ್ವಾಸ ಮೂಡಿಸಲು ಯತ್ನಿಸುತ್ತಿವೆ. ಇದಕ್ಕೆ ನಾನು ಜಗ್ಗುವುದಿಲ್ಲ ಎಂದು ಹೇಳಿದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.