ADVERTISEMENT

ಫೋನ್‌ ಕದ್ದಾಲಿಕೆ ಪ್ರಕರಣ ಸಿಬಿಐಗೆ: ಸಿಎಂ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2019, 6:33 IST
Last Updated 18 ಆಗಸ್ಟ್ 2019, 6:33 IST
   

ಬೆಂಗಳೂರು: ಫೋನ್‌ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಭಾನುವಾರ ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿ.ಎಸ್‌ ಯಡಿಯೂರಪ್ಪ, ‘ ಫೋನ್‌ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ. ನಾಳೆಯೇ (ಸೋಮವಾರ) ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿ ಆದೇಶಿಸಲಾಗುವುದು' ಎಂದು ತಿಳಿಸಿದರು.

ನವದೆಹಲಿಯಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದ ವೇಳೆ ಫೋನ್‌ ಕದ್ದಾಲಿಕೆ ವಿಚಾರ ಚರ್ಚೆಗೆ ಬಂದಿತ್ತು ಎನ್ನಲಾಗಿದೆ. ಅದರಂತೆ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ನೀಡುತ್ತಿದೆ.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.