ವರುಣಾ (ಮೈಸೂರು): ತಾನು ಪ್ರೀತಿಸುತ್ತಿದ್ದ ವ್ಯಕ್ತಿ ಮದುವೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಯುವತಿ ತನ್ನ ಸಂಬಂಧಿಕರ ಜತೆ ಸೇರಿ ಗೌಸ್ಪೀರ್ ಎಂಬುವರ ಮೇಲೆ ಹಲ್ಲೆ ನಡೆಸಿದ ಘಟನೆ ಎಂ.ಬಿ ಹಳ್ಳಿಯಲ್ಲಿ ನಡೆದಿದೆ.
ವಿವಾಹಿತನಾಗಿದ್ದ ಗೌಸ್ಪೀರ್ ಎರಡನೇ ಮದುವೆಗೆ ಒಪ್ಪಿಗೆ ಸೂಚಿಸಲಿಲ್ಲ. ಇದರಿಂದ ಕೋಪಗೊಂಡು ಯುವತಿಯು ತನ್ನ ಸಂಬಂಧಿಕರ ಜತೆಗೂಡಿ ತಿಂಗಳ ಹಿಂದೆ ಅಪಹರಿಸಿ, ಹಲ್ಲೆ ನಡೆಸಿದ್ದಾರೆ ಎಂದು ಗೌಸ್ಪೀರ್ ದೂರು ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.