ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 7ರಂದು ನಗರಕ್ಕೆ ಬರಲಿದ್ದಾರೆ.
ಅಂದು ಮಧ್ಯಾಹ್ನ 12 ಗಂಟೆಗೆ ಹೈದರಾಬಾದ್ ಕರ್ನಾಟಕ ಭಾಗದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಪಾಲ್ಗೊಳ್ಳುವರು ಎಂದು ಸೇಡಂ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ‘ಪ್ರಜಾವಾಣಿ’ಗೆ ತಿಳಿಸಿದರು.
ಜಾಧವ ಸೇರ್ಪಡೆ: ‘ಚಿಂಚೋಳಿ ಶಾಸಕ ಡಾ.ಉಮೇಶ ಜಾಧವ ಅವರು ಶಾಸಕ ಸ್ಥಾನಕ್ಕೆ ಮತ್ತು ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಮೋದಿ ಸಮಾವೇಶದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ’ ಎಂದು ಬಿಜೆಪಿಯ ಸ್ಥಳೀಯ ಮುಖಂಡರು ಹೇಳುತ್ತಿದ್ದಾರೆ.
ಆದರೆ, ಉಮೇಶ ಜಾಧವ ಅವರು ಈ ವಿಷಯವಾಗಿ ಬಹಿರಂಗವಾಗಿ ಏನನ್ನೂ ಹೇಳುತ್ತಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.