ADVERTISEMENT

ಬೆಂಗಳೂರು, ಹುಬ್ಬಳ್ಳಿಯಲ್ಲಿ ಲಸಿಕೆ ವಿತರಣೆಗೆ ಪ್ರಧಾನಿ ಚಾಲನೆ: ಡಾ.ಕೆ. ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 8:26 IST
Last Updated 9 ಜನವರಿ 2021, 8:26 IST
   

ಬೆಂಗಳೂರು: ‘ಕೋವಿಡ್ ವ್ಯಾಕ್ಸಿನ್ ಯಾವಾಗ ಬರುತ್ತದೆ, ಯಾವಾಗ ಹಂಚಿಕೆಯಾಗಲಿದೆ ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ 4 ಗಂಟೆಗೆ ಉತ್ತರ ನೀಡುತ್ತಾರೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ರಾಜ್ಯಕ್ಕೆ ಶೀಘ್ರದಲ್ಲೇ 13.90 ಲಕ್ಷ ಲಸಿಕೆ ಬರಲಿದೆ. ಹಾಗೂ ರಾಜ್ಯದಲ್ಲಿ ಬೆಂಗಳೂರು- ಹುಬ್ಬಳ್ಳಿಯ ತಲಾ ಒಂದು ಆಸ್ಪತ್ರೆಯಲ್ಲಿ ಪ್ರಧಾನಿ ಮೋದಿ ಲಸಿಕೆ ವಿತರಣೆಗೆ ದೆಹಲಿಯಿಂದಲೇ ಚಾಲನೆ ನೀಡಲಿದ್ದಾರೆ. ದೇಶದಲ್ಲಿ ಒಟ್ಟು 5,000 ಲಸಿಕೆ ಹಂಚಿಕೆ ಕೇಂದ್ರಗಳನ್ನು ಗುರುತಿಸಿದ್ದು, ಕರ್ನಾಟಕದಲ್ಲಿ 235 ಕೇಂದ್ರಗಳನ್ನು ನಿರ್ಮಿಸಲಾಗಿದೆ’ ಎಂದರು.

‘ಕೇಂದ್ರ ಸರ್ಕಾರದ ಸಚಿವಾಲಯದ ಕಾರ್ಯದರ್ಶಿಗಳು ಇಂದು ವಿಡಿಯೊ ಸಂವಾದದ ಮೂಲಕ ದೇಶದ ಎಲ್ಲ ಆರೋಗ್ಯ ಸಚಿವಾಲಯದ ಪ್ರಧಾನ ಕಾರ್ಯದರ್ಶಿಗಳು, ಅಧಿಕಾರಿಗಳು ಸೇರಿದಂತೆ ಇತರರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ’ ಎಂದರು.

ADVERTISEMENT

‘ಲಸಿಕೆ ಸರಬರಾಜು, ಸಂಗ್ರಹಣೆ, ನೀಡುವಿಕೆ ಬಗ್ಗೆ ಸಂವಾದ ನಡೆಯುತ್ತಿದೆ. ಸೋಮವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರೊಂದಿಗೆ ಪ್ರಧಾನಿ ಮೋದಿ ವಿಡಿಯೊ ಸಂವಾದ ನಡೆಸಲಿದ್ದಾರೆ. ಲಸಿಕೆ ವಿಚಾರವಾಗಿ ಮಾತನಾಡುತ್ತಾರೆ’ ಎಂದರು.

‘ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ ಬೇಡ. ಎಲ್ಲಿಯೂ ಹಕ್ಕಿ ಜ್ವರ ಕಾಣಿಸಿಕೊಂಡಿಲ್ಲ. ಎಲ್ಲ ಹಕ್ಕಿಗಳ ಪರೀಕ್ಷೆ ಮಾಡಿಸಿದ್ದು, ನೆಗೆಟಿವ್ ವರದಿ ಬಂದಿದೆ’ ಎಂದೂ ಅವರು ಸ್ಪಷ್ಟಪಡಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.