ADVERTISEMENT

ನ.30ರಂದು ರಾಜ್ಯ ಕಾಂಗ್ರೆಸ್‌ ಹಿರಿಯ ನಾಯಕರ ಸಭೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2020, 10:22 IST
Last Updated 28 ನವೆಂಬರ್ 2020, 10:22 IST
ಕಾಂಗ್ರೆಸ್‌ (ಸಾಂದರ್ಭಿಕ ಚಿತ್ರ)
ಕಾಂಗ್ರೆಸ್‌ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಹಿರಿಯ ನಾಯಕರ ಸಭೆ ನಗರದ ಹೊರವಲಯದ ಸಾದಹಳ್ಳಿ ಗೇಟ್‌ ಬಳಿಯ ಹೋಟೆಲ್‌ನಲ್ಲಿ ಸೋಮವಾರ (ನ. 30) ನಡೆಯಲಿದೆ.

ಸಭೆಯಲ್ಲಿ ಮಹಾರಾಷ್ಟ್ರ ಸಚಿವೆ ಯಶೋಮತಿ ಠಾಕೋರ್‌ ಅವರು ಎಐಸಿಸಿ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ.

ಮುಂಬರುವ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳು ಹಾಗೂ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಮತ್ತು ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧಿಸಿದಂತೆ ಸಭೆಯಲ್ಲಿ ವಿಚಾರ ವಿನಿಮಯ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಪ್ರಮುಖ ಎಲ್ಲ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.