ADVERTISEMENT

ಅಧಿವೇಶನ ಮುಂದೂಡಿ: ಎಚ್‌ಡಿಕೆ ಆಗ್ರಹ

ಎಟಿಎಂಗಳಲ್ಲಿ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಿ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 21:33 IST
Last Updated 21 ಮಾರ್ಚ್ 2020, 21:33 IST
ವಿಧಾನಸೌಧ
ವಿಧಾನಸೌಧ   

ಬೆಂಗಳೂರು: ಕೊರೊನಾ ಹರಡುವಿಕೆ ತಡೆಗಟ್ಟಲು ಸ್ವಯಂ ನಿರ್ಬಂಧಗಳನ್ನು ಪಾಲಿಸುವಂತೆ ಜನರಿಗೆ ಸೂಚಿಸಿರುವ ಸರ್ಕಾರ ವಿಧಾನಮಂಡಲ ಅಧಿವೇಶನವನ್ನುತಕ್ಷಣವೇ ಮುಂದೂಡಬೇಕು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ನೂರಾರು ಮಂದಿ ಒಂದೆಡೆ ಸೇರಬಾರದು ಎಂದು ಸರ್ಕಾರ ಹೇಳುತ್ತಿದೆ. ಹಾಗಿರುವಾಗ ಜನಪ್ರತಿನಿಧಿಗಳು, ಅಧಿಕಾರಿಗಳು, ಪತ್ರಕರ್ತರು ಒಂದೇ ಕಡೆ ಕಲೆಯುವ ಅಧಿವೇಶನ ನಡೆಸುವುದು ಸದ್ಯದ ಪರಿಸ್ಥಿತಿಯಲ್ಲಿ ಸರಿಯಲ್ಲ. ಸರ್ಕಾರ ಹೇಳುವುದೊಂದು ಮಾಡುವುದೊಂದು ಎಂಬ ಟೀಕೆಗೆ ಗುರಿಯಾಗುವ ಮುನ್ನ ಅಧಿವೇಶನ ಮುಂದೂಡುವ ಕೆಲಸ ಮಾಡಲಿ ಎಂದು ಸಲಹೆ ನೀಡಿದ್ದಾರೆ.

ಎಟಿಎಂಗಳಿಗೆ ಸುರಕ್ಷೆ: ಜನರು ಹಣ ಪಡೆಯಲು ಬಳಸುವ ಎಟಿಎಂಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಇಲ್ಲವಾಗಿದೆ. ಎಲ್ಲ ನೂರಾರು ಜನ ಗ್ರಾಹಕರು ಬಂದು ಹೋಗುವ ಈ ಎಟಿಎಂಗಳಲ್ಲಿ ಸ್ಯಾನಿಟೈಸರ್‌ಗಳನ್ನು ಕಡ್ಡಾಯವಾಗಿ ಇಡಲು ಕ್ರಮವಹಿಸಬೇಕು. ಈ ಬಗ್ಗೆ ಬ್ಯಾಂಕ್‌ಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.