ADVERTISEMENT

ಷರತ್ತಿಲ್ಲದೇ ವಿದ್ಯುತ್‌ ಸಂಪರ್ಕ: ಕೆಇಆರ್‌ಸಿ ಅಧಿಸೂಚನೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2023, 19:31 IST
Last Updated 13 ಜನವರಿ 2023, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವಾಸ್ತವ್ಯ ಪ್ರಮಾಣ ಪತ್ರದ ಅಗತ್ಯವಿಲ್ಲದೇ, ಮನೆ, ನಿವೇಶನ, ಬಡಾವಣೆ ಮತ್ತು ಕೈಗಾರಿಕಾ ಘಟಕಗಳಿಗೆ ಅವುಗಳ ಬೇಡಿಕೆಯನ್ನು ಆಧರಿಸಿ ವಿದ್ಯುತ್‌ ಸಂಪರ್ಕ ಕಲ್ಪಿಸುವ ಸಂಬಂಧ ಕೆಇಆರ್‌ಸಿ ಅಧಿಸೂಚನೆಯನ್ನು ಹೊರಡಿಸಿದೆ.

ಈ ಹಿಂದೆ ವಿದ್ಯುತ್‌ ಸಂಪರ್ಕ ಪಡೆಯಲು ಕಟ್ಟಡ ಯೋಜನಾ (ಪ್ಲಾನ್‌) ಅನುಮೋದನೆ ಪಡೆಯುವುದು ಅಗತ್ಯವಿತ್ತು. ಇನ್ನು ಮುಂದೆ ಅದರ ಅಗತ್ಯವಿಲ್ಲ. ಈಗ ಇರುವ ಏಕೈಕ ಷರತ್ತು ಎಂದರೆ, ಅರ್ಜಿ ಸಲ್ಲಿಸುವ ವ್ಯಕ್ತಿ ಕಟ್ಟಡದ ಮಾಲೀಕನಾಗಿರಬೇಕು ಅಥವಾ ಮನೆಯಲ್ಲಿರಬೇಕು ಎಂದು ನಿಯಮಾವಳಿಗೆ ತಿದ್ದುಪಡಿ ಮಾಡಲಾಗಿದೆ.

ವಾಸ್ತವ್ಯ ಪ್ರಮಾಣ ಪತ್ರ (ಓಸಿ) ನೀಡದ ಕಾರಣಕ್ಕೆ ವಿದ್ಯುತ್‌ ಸಂಪರ್ಕ ನೀಡಲು ನಿರಾಕರಿಸಲಾಗುತ್ತಿತ್ತು. ಅದರಲ್ಲೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮಸ್ಯೆಯಾಗಿ ಪರಿಣಮಿಸಿತ್ತು. ‘ಬೆಳಕು’ ಯೋಜನೆಯಡಿ ಸಂಪರ್ಕ ಕಲ್ಪಿಸಲು ಸರ್ಕಾರ ಮುಂದಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.