ಬಾಗಲಕೋಟೆ: ಗೋಹತ್ಯೆ ನಿಷೇಧ ಬಿಜೆಪಿಯ ಅಜೆಂಡಾ. ನೂರಕ್ಕೆ ನೂರು ಅದನ್ನು ಶೀಘ್ರ ಕಾಯ್ದೆ ಮಾಡಿಯೇ ತೀರುತ್ತೇವೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದಕ್ಕೆ ವಿರೋಧ ವ್ಯಕ್ತಪಡಿಸುವವರು ಅವರ ಕೆಲಸ ಅವರು ಮಾಡ್ತಾರೆ ಎಂದರು.
ಸಚಿವ ಸಂಪುಟ ವಿಸ್ತರಣೆ ವೇಳೆ ಪ್ರಭು ಚೌಹಾಣ ಅವರಿಗೆ ಸಚಿವ ಸ್ಥಾನದಿಂದ ಕೊಕ್ ಕೊಡಲಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಪದೇ ಪದೇ ಹೇಳ್ತಿದ್ದೀನಿ. ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ. 30 ವರ್ಷ ಕೆಲಸ ಮಾಡಿದೀನಿ. ಪಕ್ಷ ಗುರುತಿಸಿ, ಸೇವಕ್ ಮಂತ್ರಿ ಮಾಡಿದ್ದಾರೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದರು.
ಮಂತ್ರಿ ಆಗ್ತಿನಿ ಎಂದು ನನಗೂ ಗೊತ್ತಿರಲಿಲ್ಲ. ಪಕ್ಷದ ನಿರ್ಣಯ ಅಂತಿಮ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.