ADVERTISEMENT

News Express | ಶಿವಮೂರ್ತಿ ಶರಣರಿಗೆ ಜಾಮೀನು ಮಂಜೂರು

ಪ್ರಜಾವಾಣಿ ವಿಶೇಷ
Published 8 ನವೆಂಬರ್ 2023, 16:32 IST
Last Updated 8 ನವೆಂಬರ್ 2023, 16:32 IST

ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನುಮಂಜೂರು ಮಾಡಿದೆ. ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಬುಧವಾರ ಈ ಸಂಬಂಧ ಆದೇಶ ಪ್ರಕಟಿಸಿತು. ಏಳು ಷರತ್ತುಗಳನ್ನು ವಿಧಿಸಿರುವ ನ್ಯಾಯಪೀಠ, "ಆರೋಪಿಯು ವಿಚಾರಣೆಗೆ ಕೋರ್ಟ್ ಗೆ ಹಾಜರಾಗುವುದನ್ನು ಹೊರತುಪಡಿಸಿದಂತೆ ಚಿತ್ರದುರ್ಗ ಜಿಲ್ಲೆ ಪ್ರವೇಶಿಸಿಬಾರದು" ಎಂದು ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.