ಮಂಗಳೂರು: ನಗರದ ಸೇಂಟ್ ಅಲೋಶಿಯಸ್ ಕಾಲೇಜಿನ ಲೋಯಲಾ ಹಾಲ್ ನಲ್ಲಿ ಶನಿವಾರ ಪ್ರಜಾವಾಣಿ ಕ್ವಿಜ್ ಗೆ ಚಾಲನೆ ನೀಡಲಾಯಿತು.
ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಜಿ.ವಿ.ಹೆಗ್ಡೆ, ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಪ್ರಸರಣ ವಿಭಾಗದ ಜಿಎಂ. ಆಲಿವರ್, ಸೇಂಟ್ ಅಲೋಶಿಯಸ್ ಕಾಲೇಜಿನ ಉಪಪ್ರಾಂಶುಪಾಲೆ ಸ್ಟಾರ್ಲಿಟ್ ಡಿಸೋಜ ಇದ್ದರು.
ವಿಶ್ವಮಂಗಳ ಹೈಸ್ಕೂಲ್ ವಿದ್ಯಾರ್ಥಿ ಸೃಜನ್ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಾಲೆಗಳಿಂದ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.