ADVERTISEMENT

ಟೀಕೆಯ ರಾಜಕಾರಣ ಮಾಡೋದಿಲ್ಲ: ಪ್ರಜ್ವಲ್ ರೇವಣ್ಣ

ಸಿದ್ದರಾಮಯ್ಯ, ಪರಮೇಶ್ವರ್ ಭೇಟಿ ಮಾಡಿದ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2019, 8:45 IST
Last Updated 26 ಮಾರ್ಚ್ 2019, 8:45 IST
   

ಬೆಂಗಳೂರು:ಹಾಸನ ಕ್ಷೇತ್ರದಿಂದಜೆಡಿಎಸ್‌ –ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿಪ್ರಜ್ವಲ್ ರೇವಣ್ಣ, ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷಸಿದ್ದರಾಮಯ್ಯಅವರನ್ನು ಮಂಗಳವಾರಭೇಟಿಸಿದ್ದರಾಮಯ್ಯನವರ ಆಶೀರ್ವಾದಪಡೆದರು

ಬಳಿಕ ಮಾತನಾಡಿದ ಪ್ರಜ್ವಲ್ ರೇವಣ್ಣ, ನಾವು ಸಣ್ಣವರಿದ್ದಾಗಿಂದಲೂ ಸಿದ್ದರಾಮಯ್ಯನವರನ್ನು ನೋಡಿಕೊಂಡು ಬೆಳೆದವರು. ನಮ್ಮ ಮನೆಯವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಅವರನ್ನು ಭೇಟಿಯಾಗಿದ್ದೇನೆ.ಸಿದ್ದರಾಮಯ್ಯ ಅವರು ಕಡೂರು, ಅರಕಲಗೂಡು, ಅರಸಿಕೆರೆ ಹಾಸನಕ್ಕೆ ಚುನಾವಣಾಪ್ರಚಾರಕ್ಕೆ ಬರುವುದಾಗಿ ತಿಳಿಸಿದ್ದಾರೆ.‌

ಹಾಸನದಲ್ಲಿ ಎ ಮಂಜು ನಾಮಿನೇಷನ್‌ಗೆ ಜನ ಸೇರಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿದ ಪ್ರಜ್ವಲ್, ‘ಎ ಮಂಜು ಬಗ್ಗೆ ನನಗೆಭಯ ಇಲ್ಲ. ನಾನು ಎಂದಾದರೂ ಎ ಮಂಜು ವಿರುದ್ದ ಮಾತನಾಡಿದ್ದು ಕೇಳಿದ್ದೀರಾ. ಟೀಕೆಯ ರಾಜಕಾರಣ ಮಾಡೋದಿಲ್ಲ.

ADVERTISEMENT

₹400, ₹500ರೂಪಾಯಿ ಕೊಟ್ಟರೆ ಜನ ಸೇರಿಸೋದು ದೊಡ್ಡದಲ್ಲ. ಹಾಗೇನಾದರೂ ದುಡ್ಡು ಕೊಟ್ಟರೆ ನಾವು ಹಾಸನ ಜಿಲ್ಲೆ ತುಂಬಾ ಜನ ಸೇರಿಸ್ತೇವೆ.‌ನಾನು ಈಗ ತಾನೇ ಪ್ರಚಾರಕ್ಕೆ ಬರ್ತಿದ್ದೀನಿ. ಹೀಗಾಗಿ ಎಲ್ಲರ ಆಶೀರ್ವಾದ ತೆಗೆದುಕೊಂಡರೆ ಗೆಲ್ಲುವುದಕ್ಕೆ ಒಳ್ಳೆಯದು. ಹಾಸನ ಕಾಂಗ್ರೆಸಿಗರೆಲ್ಲರೂ ಒಟ್ಟಾಗಿ ನನಗೆ ಬೆಂಬಲ ಕೊಡ್ತಿದ್ದಾರೆ ಎಂದರು.

ಪರಮೇಶ್ವರ್ಭೇಟಿಯಾದ ಪ್ರಜ್ವಲ್ ರೇವಣ್ಣ

ಇನ್ನು ಬಿಎಂಆರ್ ಡಿಎಲ್ ಕಚೇರಿಯಲ್ಲಿ ಉಪಮುಖ್ಯಮಂತ್ರಿಪರಮೇಶ್ವರ್ ಭೇಟಿಯಾಗಿತಮ್ಮನ್ನು ಬೆಂಬಲಿಸುವಂತೆ ಹಾಗೂ ಹಾಸನ ಕೈ ಅಸಮಾಧಾನ ತಣಿಸುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.