ಬೆಂಗಳೂರು: ನಟ ಪ್ರಕಾಶ್ ರೈ ಬೆಂಬಲ ನೀಡಿ ಎಂದು ಕೋರಿದ್ದಾರೆ,ಅವರು ಪಕ್ಷಕ್ಕೆ ಸೇರಿದರೆ ಆ ಬಗ್ಗೆ ಚಿಂತಿಸಬಹುದು ಎಂದುಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಂಗಳವಾರ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು,ಬೆಂಬಲ ಕೋರಿಕೆ ಬಗ್ಗೆಪ್ರಕಾಶ್ ರೈ, ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿದ್ದಾರೆ. ಅವರುನನ್ನನ್ನೂ ಭೇಟಿ ಮಾಡಿ ಚರ್ಚಿಸಿದ್ದಾರೆ,ನಮ್ಮದು ರಾಷ್ಟ್ರೀಯ ಪಕ್ಷ ಅವರಿಗೆ ಪರೋಕ್ಷ ಬೆಂಬಲ ನೀಡಲು ಸಾಧ್ಯವಿಲ್ಲ, ಅವರು ಪಕ್ಷಕ್ಕೆ ಸೇರ್ಪಡೆಯಾದರೆ ನೋಡಬಹುದು ಎಂದುಗುಂಡೂರಾವ್ ಹೇಳಿದರು.
ಲೋಕಸಭೆ ಚುನಾವಣೆ ಸೀಟು ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಗರಂ ಆದ ವಿಚಾರದ ಬಗ್ಗೆ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಿನ್ನೆ ನಡೆದ ಸಭೆಯಲ್ಲಿಸೀಟು ಹಂಚಿಕೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ, ಸೀಟು ಹಂಚಿಕೆ ಫೈನಲ್ ಆದ ಬಳಿಕ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲಾಗುವುದು ಎಂದರು.
ನಾಳೆ ಸಂಜೆ ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಮಾತುಕತೆ ನಡೆಸಲಾಗುವುದು. ಸ್ಥಾನ ಹಂಚಿಕೆ ಕುರಿತಂತೆ ಆದಷ್ಟು ಬೇಗ ತೀರ್ಮಾನ ಮಾಡಲಾಗುವುದು ಎಂದು ದಿನೇಶ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.