ಹುಬ್ಬಳ್ಳಿ:ಮಹಾರಾಷ್ಟ್ರ ಚುನಾವಣೆಯಲ್ಲಿ ಶಿವಸೇನಾಗೆ ಅಷ್ಟು ಸ್ಥಾನ (56) ದೊರೆಯಲು ಪ್ರಧಾನಿ ನರೇಂದ್ರ ಮೋದಿಯವರೂ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಶಿವಸೇನಾವು ಅಪ್ರಾಯೋಗಿಕ ಮತ್ತು ಅಸಾಧ್ಯವಾದ ಷರತ್ತುಗಳನ್ನು ಮುಂದಿಟ್ಟಿದ್ದರಿಂದ ಬಿಜೆಪಿಯು ಅತಿದೊಡ್ಡ ಪಕ್ಷವಾಗಿದ್ದರೂ ಸರ್ಕಾರ ರಚನೆಯಿಂದ ದೂರ ಉಳಿಯುವಂತಾಯಿತು. ಶಿವಸೇನಾ ಜತೆ ಉತ್ತಮ ಬಾಂಧವ್ಯ ಇರುವಂತೆ ನೋಡಿಕೊಳ್ಳಲು ನಾವು ಎಲ್ಲ ರೀತಿಯ ಪ್ರಯತ್ನ ಮಾಡಿದಿವು. ಆದರೆ, ಅವರು ಅಪ್ರಾಯೋಗಿಕ ಷರತ್ತುಗಳನ್ನು ಮುಂದಿಟ್ಟರು’ ಎಂದು ಜೋಶಿ ಹೇಳಿದ್ದಾರೆ.
ಮಹಾರಾಷ್ಟ್ರ ಸರ್ಕಾರ ರಚನೆಗೆ ಸಂಬಂಧಿಸಿ ಉಂಟಾದ ಬಿಕ್ಕಟ್ಟಿನ ಪರಿಣಾಮವಾಗಿ ಎನ್ಡಿಎ ಮೈತ್ರಿಕೂಟದಿಂದಶಿವಸೇನಾ ಹೊರಬಂದಿದೆ.ಶಿವಸೇನಾ ಸಂಸದ ಹಾಗೂ ಕೇಂದ್ರದಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಸಚಿವಅರವಿಂದ್ ಸಾವಂತ್ ಅವರು ಕೇಂದ್ರ ಸಂಪುಟದಿಂದ ಹೊರ ಬಂದಿರುವುದಾಗಿ ಸೋಮವಾರ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.