ADVERTISEMENT

ದೇವಸ್ಥಾನಗಳಲ್ಲಿ ಪ್ರಸಾದ ತಯಾರಿ; ಹೊಸ ಸುತ್ತೋಲೆ ಹೊರಡಿಸಿಲ್ಲ: ಮುಜರಾಯಿ ಸಚಿವ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2018, 8:09 IST
Last Updated 18 ಡಿಸೆಂಬರ್ 2018, 8:09 IST
   

ಬೆಳಗಾವಿ: ದೇವಸ್ಥಾನಗಳಲ್ಲಿ ಪ್ರಸಾದ ತಯಾರಿ, ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಸಂಬಂಧಿಸಿದಂತೆ ನಾವು ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ಮುಜರಾಯಿ ಸಚಿವ ರಾಜಶೇಖರ ಪಾಟೀಲ ಹೇಳಿದರು.

ಅದು 2012ರಲ್ಲಿ ಹೊರಡಿಸಿದ ಸುತ್ತೋಲೆ. ಆ ಸುತ್ತೋಲೆಯಲ್ಲಿ ದೇಗುಲದಲ್ಲಿ ಸಿಸಿಟಿವಿ ಅಳವಡಿಸುವುದು ಕಡ್ಡಾಯ ಎಂಬ ಅಂಶವಿದೆ. ಘಟನೆ ಮರುಕಳಿಸಬಾರದು ಎಂಬುದು ನಮ್ಮ ಬಯಕೆ. ಹೀಗಾಗಿ ಅದೇ ಸುತ್ತೋಲೆಯನ್ನು ನೆನಪಿಸಲಾಗಿದೆ ಎಂದರು.

ಸುಳ್ವಾಡಿ ಮಾರಮ್ಮ ದೇಗುಲವನ್ನು ಮುಜರಾಯಿ ವ್ಯಾಪ್ತಿಗೆ ಪಡೆಯುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೇವಸ್ಥಾನ ವಶಕ್ಕೆ ಪಡೆಯುವ ಬಗ್ಗೆ ಸಲಹೆ ಬಂದಿದೆ. ಸದನದಲ್ಲಿ ಕೆಲವು ಸದಸ್ಯರು ಸಲಹೆ ನೀಡಿದ್ದಾರೆ.‌ ಅದರ ಬಗ್ಗೆ ಚರ್ಚೆ ಮಾಡುತ್ತೇವೆ. ಮೊದಲು ಜಿಲ್ಲಾಧಿಕಾರಿ ಪ್ರಸ್ತಾವನೆ ಸಲ್ಲಿಸಬೇಕು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.