ADVERTISEMENT

ಪ್ರಸನ್ನ ಉಪವಾಸ ಅಂತ್ಯ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2019, 17:04 IST
Last Updated 11 ಅಕ್ಟೋಬರ್ 2019, 17:04 IST
ಎಳನೀರು ಕುಡಿಯುವ ಮೂಲಕ ಪ್ರಸನ್ನ ಅವರು ಉಪವಾಸ ಅಂತ್ಯಗೊಳಿಸಿದರು. ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಇದ್ದಾರೆ -ಪ್ರಜಾವಾಣಿ ಚಿತ್ರ
ಎಳನೀರು ಕುಡಿಯುವ ಮೂಲಕ ಪ್ರಸನ್ನ ಅವರು ಉಪವಾಸ ಅಂತ್ಯಗೊಳಿಸಿದರು. ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಇದ್ದಾರೆ -ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಪವಿತ್ರ ಆರ್ಥಿಕತೆ’ ಜಾರಿಗೆ ಒತ್ತಾಯಿಸಿ ಆರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರಂಗಕರ್ಮಿ ಪ್ರಸನ್ನ ಶುಕ್ರವಾರ ನಿರಶನ ಅಂತ್ಯಗೊಳಿಸಿದರು.

ತಿಂಗಳೊಳಗಾಗಿ ಕೇಂದ್ರ ಹಣಕಾಸು ಸಚಿವರೊಂದಿಗೆ ಪ್ರಸನ್ನ ಅವರ ಭೇಟಿಗೆ ಅನುವು ಮಾಡಿಕೊಡುವುದು. ಪವಿತ್ರ ಆರ್ಥಿಕತೆ ಜಾರಿ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯುವುದಾಗಿ ಸತ್ಯಾಗ್ರಹ ಸ್ಥಳಕ್ಕೆ ಗುರುವಾರ ಭೇಟಿನೀಡಿದ್ದ ಕೇಂದ್ರ ರಸಗೊಬ್ಬರ ಸಚಿವ ಸದಾನಂದಗೌಡ ನೀಡಿದ ಭರವಸೆ ಹಿನ್ನೆಲೆಯಲ್ಲಿ ಉಪವಾಸ ಕೈಬಿಡುವ ನಿರ್ಧಾರ ತೆಗೆದುಕೊಂಡರು.

‘ಗ್ರಾಮ ಸೇವಾ ಸಂಘದ ವತಿಯಿಂದ ಈ ಹೋರಾಟ ನಡೆಯುತ್ತಿದ್ದು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಒಳ್ಳೆಯ ಮಾತುಗಳನ್ನಾಡಿದ್ದಾರೆ. ಹೋರಾಟವನ್ನು ಮೆಟ್ಟಿಲುಗಳಂತೆ ಬಳಸಿಕೊಂಡು ಬೇರೆಯವರು ಅಧಿಕಾರಕ್ಕೆ ಬರುವಂತೆ ಮಾಡುವುದು ನಮ್ಮ ಉದ್ದೇಶವಲ್ಲ’ ಎಂದು ಪ್ರಸನ್ನ ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.