ADVERTISEMENT

ಹೋರಾಟಕ್ಕೆ ದೇವೇಗೌಡ, ಸಿದ್ದರಾಮಯ್ಯ ಬೆಂಬಲ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2019, 19:45 IST
Last Updated 9 ಅಕ್ಟೋಬರ್ 2019, 19:45 IST
ಪ್ರಸನ್ನ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಮತ್ತು ದೇವೇಗೌಡ
ಪ್ರಸನ್ನ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಮತ್ತು ದೇವೇಗೌಡ   

ಬೆಂಗಳೂರು: ಪವಿತ್ರ ಆರ್ಥಿಕತೆಗೆ ಆಗ್ರಹಿಸಿ ರಂಗಕರ್ಮಿ ಪ್ರಸನ್ನ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸ್ಥಳಕ್ಕೆ ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬುಧವಾರ ಭೇಟಿ ನೀಡಿ, ಬೆಂಬಲ ಸೂಚಿಸಿದರು.

ಪ್ರತ್ಯೇಕವಾಗಿ ಬಂದರೂ ಇಬ್ಬರು ನಾಯಕರು ಒಂದೇ ಸಮಯಕ್ಕೆ ಉಪವಾಸ ಸ್ಥಳಕ್ಕೆ ಬಂದರು.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮಂತಹ ಹೋರಾಟಗಾರರ ಅವಶ್ಯಕತೆಯಿದೆ. ಹೋರಾಟಕ್ಕೆ ದೇಹದಲ್ಲಿ ಸಕ್ಕರೆ ಅಂಶವೂ ಸಮತೋಲನದಲ್ಲಿರಬೇಕು‌‌. ಮುಂದಿನ ಹೋರಾಟಕ್ಕೆ ನೀವು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟು, ವೈದ್ಯರ ಸಲಹೆಯಂತೆ ನಡೆದುಕೊಳ್ಳಬೇಕು’ ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.

ADVERTISEMENT

‘ಪ್ರಸನ್ನ ಅವರು ನಾಲ್ಕೈದು ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಅವರ ಆರೋಗ್ಯ ಕ್ಷೀಣಿಸುತ್ತಿದ್ದರೂ ಸರ್ಕಾರ ಇತ್ತ ಗಮನವೇ ಹರಿಸದಿರುವುದು ಸರಿಯಲ್ಲ’ ಎಂದು ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.