ADVERTISEMENT

ಪ್ರತಾಪ್‌ ಸಿಂಹನ ತಮ್ಮ ವಿಕ್ರಮ್ ಮರಗಳ್ಳತನದಲ್ಲಿ ತೊಡಗಿದ್ದಾನೆ: ಕಾಂಗ್ರೆಸ್‌ ಆರೋಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಡಿಸೆಂಬರ್ 2023, 6:19 IST
Last Updated 24 ಡಿಸೆಂಬರ್ 2023, 6:19 IST
<div class="paragraphs"><p>ಕಾಂಗ್ರೆಸ್‌</p></div>

ಕಾಂಗ್ರೆಸ್‌

   

ಬೆಂಗಳೂರು: ಪ್ರತಾಪ್‌ ಸಿಂಹ ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಮರಗಳ್ಳತನದಲ್ಲಿ ತೊಡಗಿದ್ದಾನೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ಬಗ್ಗೆ ಕಾಂಗ್ರೆಸ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದೆ.

ADVERTISEMENT

ಪ್ರತಾಪ್‌ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುದ್ದಾರೆ. ಇಲ್ಲಿನ ತಹಸೀಲ್ದಾರ್ ಮಮತಾ ಅವರಿಂದ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಪ್ರಕರಣದಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದಾರೆ. ಘಟನೆ ಬಗ್ಗೆ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ಮಾಡಿದ್ದಾರೆ ಎಂದು ಕಾಂಗ್ರೆಸ್‌ ತಿಳಿಸಿದೆ. 

ಬಿಜೆಪಿಯ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ? ಎಂದು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.