ADVERTISEMENT

ಖಾದಿ, ಗ್ರಾಮೋದ್ಯೋಗಕ್ಕೆ ಆದ್ಯತೆ: ಬಸವರಾಜ ಬೊಮ್ಮಾಯಿ‌

ಖಾದಿ ಉತ್ಸವಕ್ಕೆ ಮುಖ್ಯಮಂತ್ರಿ ಚಾಲನೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 20:13 IST
Last Updated 26 ಜನವರಿ 2023, 20:13 IST
ನಗರದ ಅರಮನೆ ಮೈದಾನದಲ್ಲಿ ಗುರುವಾರ ಆರಂಭವಾದ ಖಾದಿ ಉತ್ಸವದಲ್ಲಿ ಜನರು ಖರೀದಿಯಲ್ಲಿ ತೊಡಗಿದ್ದರು –ಪ್ರಜಾವಾಣಿ ಚಿತ್ರ
ನಗರದ ಅರಮನೆ ಮೈದಾನದಲ್ಲಿ ಗುರುವಾರ ಆರಂಭವಾದ ಖಾದಿ ಉತ್ಸವದಲ್ಲಿ ಜನರು ಖರೀದಿಯಲ್ಲಿ ತೊಡಗಿದ್ದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಖಾದಿಗೆ ಉತ್ತಮ ಭವಿಷ್ಯವಿದೆ. ಯಾರೂ ಭಯ ಪಡುವ ಅವಶ್ಯಕತೆ ಇಲ್ಲ. ಖಾದಿ ಮತ್ತು ಗ್ರಾಮೋದ್ಯೋಗದಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ.‌ ಹೀಗಾಗಿ, ಈ ಬಾರಿಯ ಬಜೆಟ್‌ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ಆದ್ಯತೆ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಭರವಸೆ ನೀಡಿದರು.

ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನದ ಉದ್ಘಾಟಿಸಿ ಅವರು ಮಾತನಾಡಿದರು.

‘ಪಾಲಿಯೆಸ್ಟರ್ ಬಟ್ಟೆಗಳ ಉಪಯೋಗ ಹೆಚ್ಚಾದಾಗ ಖಾದಿ ವಲಯಕ್ಕೆ ತೊಂದರೆಯಾಗಿತ್ತು. ಆದರೆ, ಈಗ ಸಾಕಷ್ಟು ಬದಲಾವಣೆಯಾಗಳಾಗಿವೆ. ಖಾದಿ ಬಟ್ಟೆಗಳು, ಸಾವಯವ ಆಹಾರಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಅಮೆಜಾನ್ ಹಾಗೂ ಪ್ಲಿಪ್ ಕಾರ್ಟ್‌ನಂತಹ ಸಂಸ್ಥೆಗಳು ಖಾದಿ ವಸ್ತುಗಳ ಖರೀದಿಗೆ ಆಸಕ್ತಿವಹಿಸಿವೆ. ನೇರವಾಗಿ ಉತ್ಪಾದಕರಿಂದ ಮಾರುಕಟ್ಟೆಗೆ ಕಳುಹಿಸುವ ವ್ಯವಸ್ಥೆ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.

ADVERTISEMENT

‘ಖಾದಿ ಗ್ರಾಮೋದ್ಯೋಗ ಸಂಸ್ಥೆಯ ಆರ್ಥಿಕವಾಗಿ ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಬಾಕಿ ಉಳಿದಿರುವ ಪ್ರೋತ್ಸಾಹಧನದ ಮೊತ್ತ ₹74 ಕೋಟಿ ರೂಪಾಯಿ ಅನುಮೋದನೆ ನೀಡಲಾಗುವುದು’ ಎಂದರು.

ವಿಧಾನಪರಿಷತ್ ಛಲವಾದಿ ನಾರಾಯಣಸ್ವಾಮಿ, ಖಾದಿ ಮಂಡಳಿ ಅಧ್ಯಕ್ಷ ನಾಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.