ADVERTISEMENT

ಅಂತರರಾಜ್ಯ ಬಸ್‌ ಸಂಚಾರಕ್ಕೆ ಸಿದ್ಧತೆ: ಸವದಿ

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 21:21 IST
Last Updated 8 ಜೂನ್ 2020, 21:21 IST
   

ಕಲಬುರ್ಗಿ: ‘ಮಹಾರಾಷ್ಟ್ರ ಹೊರತುಪಡಿಸಿ ಉಳಿದ ರಾಜ್ಯಗಳಿಗೆ ಬಸ್‌ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ. ಈಗಾಗಲೇ ಸಂಬಂಧಿಸಿದ ರಾಜ್ಯಗಳಿಗೂ ಪತ್ರ ಬರೆಯಲಾಗಿದ್ದು, ಅಲ್ಲಿಂದ ಒಪ್ಪಿಗೆ ಬಂದರೆ ಸಂಚಾರ ಆರಂಭಿಸಲಾಗುವುದು’ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

‘ರಾಜ್ಯದೊಳಗೆ ಎ.ಸಿ ಸ್ಲೀಪರ್‌ ಕೋಚ್‌ ಬಸ್‌ಗಳ ಟಿಕೆಟ್‌ ಬುಕಿಂಗ್‌ ಆರಂಭಿಸಲಾಗಿದೆ’ ಎಂದು ಸೋಮ
ವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.‌

‘ಮುಂದಿನ ಮೂರು ತಿಂಗಳಲ್ಲಿ 4,000 ಹೊಸ್‌ ಬಸ್‌ಗಳನ್ನು ಖರೀದಿಸಿ, ಸಾರಿಗೆ ನಿಗಮಗಳಿಗೆ ನೀಡಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.