ಸಾಂದರ್ಭಿಕ ಚಿತ್ರ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೊಡಮಾಡುವ ‘ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ ಪ್ರಶಸ್ತಿ’ಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಮೂವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಯಾದಗಿರಿ ಅಗ್ನಿಶಾಮಕ ಠಾಣೆಯ ಪ್ರಮುಖ ಅಗ್ನಿಶಾಮಕ ಚಿದಾನಂದ ಪರ್ವತಯ್ಯಾ ಹಿರೇಮಠ, ಜೇವರ್ಗಿ ಅಗ್ನಿಶಾಮಕ ಠಾಣೆಯ ಮಲ್ಲಿಕಾರ್ಜುನ ಹಣಮಂತಗೊಳ, ಅಂಜನಾಪುರ ಅಗ್ನಿಶಾಮಕ ಠಾಣೆಯ ಟಿ.ಎಂ ಮಧುಸೂದನ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ (ತರಬೇತಿ ಮತ್ತು ಎಸ್ಡಿಆರ್ಎಫ್) ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.