ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥರು ಸನ್ಯಾಸಾಶ್ರಮ ಸ್ವೀಕರಿಸಿ 80 ವರ್ಷಗಳು ಪೂರೈಸಿರುವ ಪ್ರಯುಕ್ತ ಇದೇ 27ರಂದು ಇಲ್ಲಿನ ಪೇಜಾವರ ಮಠದಲ್ಲಿ ಹಮ್ಮಿಕೊಂಡಿರುವ ಅಭಿನಂದನಾ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಭಾಗವಹಿಸಲಿದ್ದಾರೆ.
ಅಂದು ಮಧ್ಯಾಹ್ನ 12ಕ್ಕೆ ಪೇಜಾವರ ಶ್ರೀಗಳನ್ನು ಭೇಟಿಮಾಡಲಿರುವ ರಾಷ್ಟ್ರಪತಿಗಳು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 12.45ಕ್ಕೆ ಶ್ರೀಕೃಷ್ಣಮಠದಲ್ಲಿ ದೇವರ ದರ್ಶನ ಮಾಡಲಿದ್ದಾರೆ. ಕೇಂದ್ರ ಸಚಿವೆ ಉಮಾ ಭಾರತಿ ಸಹ ಪಾಲ್ಗೊಳ್ಳಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.