ADVERTISEMENT

ಇದೇ 10ಕ್ಕೆ ರಾಜ್ಯಕ್ಕೆ ದ್ರೌಪದಿ ಮುರ್ಮು

​ಪ್ರಜಾವಾಣಿ ವಾರ್ತೆ
Published 5 ಜುಲೈ 2022, 18:14 IST
Last Updated 5 ಜುಲೈ 2022, 18:14 IST
 ದ್ರೌಪದಿ ಮುರ್ಮು
ದ್ರೌಪದಿ ಮುರ್ಮು   

ಬೆಂಗಳೂರು: ಬಿಜೆಪಿ ನೇತೃತ್ವದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇದೇ 10 ರಂದು ಮತ ಯಾಚನೆಗೆ ರಾಜ್ಯಕ್ಕೆ ಬರಲಿದ್ದು, ಜನಪ್ರತಿನಿಧಿಗಳ ಜೊತೆ ಸಭೆಗಳಲ್ಲಿ ಭಾಗವಹಿಸುವರು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ಕುಮಾರ್ ಸುರಾನ ತಿಳಿಸಿದ್ದಾರೆ.

ಮತ ಯಾಚನೆಯ ಉದ್ದೇಶದಿಂದ ದ್ರೌಪದಿಯವರು ವಿವಿಧ ರಾಜ್ಯಗಳಲ್ಲಿ ಪ್ರವಾಸ ಆರಂಭಿಸಿದ್ದಾರೆ. ರಾಜ್ಯದಲ್ಲಿ ಜೆಡಿಎಸ್‌ ಕೂಡಾ ದ್ರೌಪದಿ ಅವರಿಗೆ ಬೆಂಬಲ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT