ADVERTISEMENT

ಕಾಂಗ್ರೆಸ್‌ನ ಬೈರತಿ ಸುರೇಶ್‌ಗೆ ಕೇಸರಿ ಶಾಲು ಹಾಕಿದ ಬಿಜೆಪಿ ಶಾಸಕರು

​ಪ್ರಜಾವಾಣಿ ವಾರ್ತೆ
Published 18 ಜುಲೈ 2022, 15:32 IST
Last Updated 18 ಜುಲೈ 2022, 15:32 IST
ನೂತನ ರಾಷ್ಟ್ರಪತಿ ಆಯ್ಕೆಗಾಗಿ ವಿಧಾನಸೌಧದ ಮೊದಲನೇ ಮಹಡಿಯ ಮತಗಟ್ಟೆಯಲ್ಲಿ ಸೋಮವಾರ ಮತಚಲಾಯಿಸಲು ಬಂದಿದ್ದ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಅವರಿಗೆ ಶಾಸಕರಾದ ಗೂಳಿಹಟ್ಟಿ ಶೇಖರ್, ರಾಜೂಗೌಡ ಮತ್ತು ಎಂ.ಪಿ. ರೇಣುಕಾಚಾರ್ಯ ಕೇಸರಿ ಶಾಲು ಹಾಕಿ ಸ್ವಾಗತಿಸಿದ ಘಟನೆ ಸೋಮವಾರ ನಡೆಯಿತು -ಪ್ರಜಾವಾಣಿ ಚಿತ್ರ/ ರಂಜು ಪಿ
ನೂತನ ರಾಷ್ಟ್ರಪತಿ ಆಯ್ಕೆಗಾಗಿ ವಿಧಾನಸೌಧದ ಮೊದಲನೇ ಮಹಡಿಯ ಮತಗಟ್ಟೆಯಲ್ಲಿ ಸೋಮವಾರ ಮತಚಲಾಯಿಸಲು ಬಂದಿದ್ದ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಅವರಿಗೆ ಶಾಸಕರಾದ ಗೂಳಿಹಟ್ಟಿ ಶೇಖರ್, ರಾಜೂಗೌಡ ಮತ್ತು ಎಂ.ಪಿ. ರೇಣುಕಾಚಾರ್ಯ ಕೇಸರಿ ಶಾಲು ಹಾಕಿ ಸ್ವಾಗತಿಸಿದ ಘಟನೆ ಸೋಮವಾರ ನಡೆಯಿತು -ಪ್ರಜಾವಾಣಿ ಚಿತ್ರ/ ರಂಜು ಪಿ   

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಲು ಬಂದ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಅವರಿಗೆ ಬಿಜೆಪಿ ಶಾಸಕರು ಕೇಸರಿ ಶಾಲು ಹಾಕಿ ಸ್ವಾಗತಿಸಿದ ಘಟನೆ ಸೋಮವಾರ ವಿಧಾನಸೌಧದಲ್ಲಿ ನಡೆಯಿತು.

ಸುರೇಶ್ ಅವರು ಮತಗಟ್ಟೆಯತ್ತ ತೆರಳುತ್ತಿದ್ದರು. ಆಗ ಮತದಾನ ಮಾಡಿ ವಾಪಸ್ ಬರುತ್ತಿದ್ದ ಬಿಜೆಪಿ ಶಾಸಕರಾದ ರಾಜೂಗೌಡ, ಗೂಳಿಹಟ್ಟಿ ಶೇಖರ್, ಎಂ.ಪಿ. ರೇಣುಕಾಚಾರ್ಯ ಮುಖಾಮುಖಿಯಾದರು.

ತಮ್ಮ ಹೆಗಲ‌ ಮೇಲಿದ್ದ ಕೇಸರಿ ಶಾಲನ್ನು ತೆಗೆದ ರಾಜೂಗೌಡ ಅವರು ಬೈರತಿ ಸುರೇಶ್ ಅವರ ಹೆಗಲಿಗೆ ಹಾಕಿದರು. ತಕ್ಷಣ ಅದನ್ನು ತೆಗೆದ ಸುರೇಶ್ ವಾಪಸ್ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.