ADVERTISEMENT

ರೈತರ ಆದಾಯ ದುಪ್ಪಟ್ಟು ಮಾಡದ ಮೋದಿ ಖರ್ಚನ್ನೇ ಎರಡರಷ್ಟಾಗಿಸಿದ್ದಾರೆ: ಕಾಂಗ್ರೆಸ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಜುಲೈ 2021, 7:56 IST
Last Updated 11 ಜುಲೈ 2021, 7:56 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆಂದು ಹೇಳಿದ್ದ ಮೋದಿ ಖರ್ಚನ್ನೇ ಎರಡರಷ್ಟಾಗಿಸಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ಈ ವಿಚಾರವಾಗಿ ಭಾನುವಾರ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, 'ಇಂಧನ ತೈಲಗಳ ಬೆಲೆ ಏರಿಕೆ ಪರಿಣಾಮದ ಆಳ, ಅಗಲದ ಅಂದಾಜಿಲ್ಲಾದ ದುಷ್ಟ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿದೆ. ಆ ಮೂಲಕ ಕೃಷಿ, ಉತ್ಪಾದನೆ, ಕೈಗಾರಿಕೆ ಸೇರಿದಂತೆ ಇಡೀ ಅರ್ಥ ವ್ಯವಸ್ಥೆಯನ್ನ ಬುಡಮೇಲಾಗಿಸಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ.

'ರೈತರ ಆದಾಯ ಡಬಲ್ ಮಾಡುತ್ತೇನೆಂದು ಹೇಳಿದ್ದ ಪ್ರಧಾನಿ ಮೋದಿ ರೈತರ ಖರ್ಚನ್ನು ಡಬಲ್‌ ಮಾಡುತ್ತಿದ್ದಾರೆ. ಈಗಾಗಲೇ ರೈತ ಸೋತಿದ್ದಾನೆ, ಮುಂದೆ ಸಾಯುತ್ತಾನೆ' ಎಂದು ಕಾಂಗ್ರೆಸ್‌ ಟೀಕಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT