ADVERTISEMENT

79 ಕೈದಿಗಳಿಗೆ ಬಿಡುಗಡೆ ಭಾಗ್ಯ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2018, 19:30 IST
Last Updated 1 ಸೆಪ್ಟೆಂಬರ್ 2018, 19:30 IST

ಬೆಂಗಳೂರು: ರಾಜ್ಯದ ಏಳು ಕೇಂದ್ರ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 79 ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ರಾಜ್ಯಪಾಲ ವಜೂಭಾಯಿ ವಾಲಾ ಒಪ್ಪಿಗೆ ಸೂಚಿಸಿದ್ದಾರೆ.

ಬಿಡುಗಡೆಗೆ ಅರ್ಹರಾದ 93 ಕೈದಿಗಳ ಪಟ್ಟಿಯನ್ನು ರಾಜ್ಯ ಸರ್ಕಾರರಾಜ್ಯಪಾಲರಿಗೆ ಕಳುಹಿಸಿತ್ತು. ಅದನ್ನು ಪರಿಶೀಲಿಸಿದ ರಾಜ್ಯಪಾಲರು,14 ಕೈದಿಗಳನ್ನು ಪಟ್ಟಿಯಿಂದ ಹೊರಗಿಟ್ಟು ಉಳಿದ ಕೈದಿಗಳ ಬಿಡುಗಡೆಯ ಕಡತಕ್ಕೆ ಸಹಿ ಮಾಡಿ ಗೃಹ ಇಲಾಖೆಗೆ ಕಳುಹಿಸಿದ್ದಾರೆ. ರಾಜ್ಯಪಾಲರು ನೀಡಿದ ಕಡತವನ್ನು ಕಾರಾಗೃಹ ಇಲಾಖೆಗೆ ಕಳುಹಿಸಲಾಗಿದೆ.

ಬೆಂಗಳೂರು ಪರಪ್ಪನಅಗ್ರಹಾರ ಕೇಂದ್ರ ಕಾರಾಗೃಹ 28

ADVERTISEMENT

ಮೈಸೂರು 18

ಕಲಬುರ್ಗಿ 13

ಬೆಳಗಾವಿ 9

ಬಳ್ಳಾರಿ 5

ವಿಜಯಪುರ 4

ಧಾರವಾಡ 2

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.