ADVERTISEMENT

ಕೃಷ್ಣ ಜತೆ ಸಚಿವ ಡಿ.ಕೆ.ಶಿವಕುಮಾರ್ ರಹಸ್ಯ ಮಾತುಕತೆ

​ಪ್ರಜಾವಾಣಿ ವಾರ್ತೆ
Published 1 ಮೇ 2019, 13:20 IST
Last Updated 1 ಮೇ 2019, 13:20 IST
   

ಬೆಂಗಳೂರು:ಸದಾಶಿವನಗರದ ಎಸ್‌.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವ ಡಿ.ಕೆ.ಶಿವಕುಮಾರ್ ಒಂದು ಗಂಟೆ ಕಾಲ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.

‘ಎಸ್‌.ಎ.ಕೃಷ್ಣ ಅವರ ಹುಟ್ಟುಹಬ್ಬಕ್ಕೆ ಶುಭಕೋರಲು ಬಂದಿದ್ದೇನೆ. ಅವರೊಂದಿಗೆ ರಹಸ್ಯ ಮಾತುಕತೆಗಳೇನು ನಡೆಸಿಲ್ಲ. ನಾನು ತೆರೆದ ಪುಸ್ತಕವಿದ್ದಂತೆ. ಏನೇ ಮಾತನಾಡುವುದಿದ್ದರೂ ಬಹಿರಂಗವಾಗೇ ಆಡುತ್ತೇನೆ. ನಾನು ಯಾರಿಗೂ ಹೆದರುವುದಿಲ್ಲ’ ಎಂದು ಶಿವಕುಮಾರ್‌ ಹೇಳಿದರು.

ಡಿ.ಕೆ.ಶಿವಕುಮಾರ್‌ ಅವರು ಕೃಷ್ಣ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನೆಯಲ್ಲಿದ್ದಬಿಜೆಪಿ ಸಂಸದ ಪ್ರತಾಪ್‌ ಸಿಂಹ, ಅವರ ಕಾಲಿಗೆ ನಮಸ್ಕರಿಸಿದರು.

ADVERTISEMENT

‘ನಾನು ಈಗ ಕಾಂಗ್ರೆಸ್ ವಕ್ತಾರನಲ್ಲ. ಕೇವಲ ಕಾರ್ಯಕರ್ತ, ಸಚಿವನಷ್ಟೇ.‌ ನನ್ನ ವಿಷಯಕ್ಕೆ ಮಾತ್ರ ಪ್ರತಿಕ್ರಿಯೆ ನೀಡಬಲ್ಲೆ. ಬೇರೆಯವರ ವಿಷಯಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ’ ಎಂದುಜಿಟಿಡಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

‘ಪ್ರತಿಯೊಬ್ಬರೂ ಮೈತ್ರಿ ಧರ್ಮ ಪಾಲನೆ ಮಾಡಲೇಬೇಕು.‌ ನಾವಂತೂ ಪಾಲನೆ ಮಾಡಿದ್ದೇವೆ.‌ ಅವರೂ ಪಾಲಿಸುತ್ತಾರೆ ಎಂಬ ವಿಶ್ವಾಸವಿದೆ’ ಎಂದಷ್ಟೇ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.