ಬೆಂಗಳೂರು: ಉಗಾಂಡದಲ್ಲಿ ನಡೆದ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ನ (ಸಿಪಿಎ) 64 ನೇ ಸಮ್ಮೇಳನದಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಪಾಕಿಸ್ತಾನಕ್ಕೆ ಕರ್ನಾಟಕ ವಿಧಾನಸಭಾಧ್ಯಕ್ಷ
ವಿಶ್ವೇಶ್ವರ ಹೆಗಡೆ ಕಾಗೇರಿ ತಿರುಗೇಟು ನೀಡಿದ್ದಾರೆ.
ಇದೇ 28ರಂದು ನಡೆದ ಸಮ್ಮೇಳನದಲ್ಲಿ ಮಾತನಾಡಿದ ಪಾಕಿಸ್ತಾನದ ಪ್ರತಿನಿಧಿ, ‘ಕಾಶ್ಮೀರ
ದಲ್ಲಿ ಸೇನಾಡಳಿತವಿದ್ದು, ಪ್ರಜಾಪ್ರಭುತ್ವ ಇಲ್ಲ’ ಎಂದು ಟೀಕಿಸಿದರು.
ಆಗ ಮಧ್ಯ ಪ್ರವೇಶಿಸಿದ ಕಾಗೇರಿ, ‘ಕಾಶ್ಮೀರ ಭಾರತದ ಆಂತರಿಕ ವಿಷಯ. ಅಲ್ಲಿ ರಾಜ್ಯಪಾಲರ ಆಡಳಿತ ಇದೆ ವಿನಃ ಸೈನಿಕ ಆಡಳಿತವಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.