ADVERTISEMENT

ಪಾಕಿಸ್ತಾನ ಪರ ಜೈಕಾರ ಕೂಗಿದವನಿಗೆ ಥಳಿತ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 22:00 IST
Last Updated 18 ಫೆಬ್ರುವರಿ 2021, 22:00 IST

ಕೆ.ಆರ್‌.ಪೇಟೆ (ಮಂಡ್ಯ): ಪಟ್ಟಣದ ಶ್ರೀರಂಗ ಚಿತ್ರಮಂದಿರದ ಪಾಳು ಭೂಮಿಯಲ್ಲಿ ಬೀಡು ಬಿಟ್ಟಿದ್ದ ಸರ್ಕಸ್‌ ತಂಡದ ವ್ಯಕ್ತಿಯೊಬ್ಬ ಗುರುವಾರ ‘ಪಾಕಿಸ್ತಾನ ಜಿಂದಾಬಾದ್‌’ ಎಂದು ಕೂಗಿದ್ದು, ಸಾರ್ವಜನಿಕರು ಆತನನ್ನು ಹಿಡಿದು ಥಳಿಸಿದ್ದಾರೆ.

ಮಹಾರಾಷ್ಟ್ರ ಮೂಲದ ಅಸ್ಲಂ ಸಮೂಲಿ ಥಳಿತಕ್ಕೆ ಒಳಗಾದ ವ್ಯಕ್ತಿ. ತಕ್ಷಣ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು. ಪೊಲೀಸರು ಅವನಿಗೆ ಎಚ್ಚರಿಕೆ ಕೊಟ್ಟು ಕಳುಹಿಸಿದರು. ಭಾಷೆಯ ಗೊಂದಲದಿಂದ ಸಮಸ್ಯೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT