ADVERTISEMENT

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳ ಮೇಲೆ ಹಲ್ಲೆ ಪ್ರಕರಣ: ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2020, 8:56 IST
Last Updated 19 ಫೆಬ್ರುವರಿ 2020, 8:56 IST
ಪಾಕ್ ಪರ ಘೋಷಣೆ ಕೂಗಿದ್ದರು ಎನ್ನಲಾದ ಆರೋಪಿಗಳು
ಪಾಕ್ ಪರ ಘೋಷಣೆ ಕೂಗಿದ್ದರು ಎನ್ನಲಾದ ಆರೋಪಿಗಳು   

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳ ಮೇಲೆ ಕೋರ್ಟ್ ಆವರಣದಲ್ಲಿ ಹಲ್ಲೆ ನಡೆಸಿದವರ ವಿರುದ್ಧ ವಿದ್ಯಾನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೇಶದ್ರೋಹ ಪ್ರಕರಣದ ಆರೋಪದ ಮೇಲೆ ಕೆಎಲ್‌ಇ ಎಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ ಕೋರ್ಟ್‌ಗೆ ಕರೆತರಲಾಗಿತ್ತು. ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ ಮೇಲೆ ಅವರನ್ನು ಕರೆದೊಯ್ಯುವಾಗ ಕೆಲವರು ಹಲ್ಲೆ ನಡೆಸಿದ್ದರು. ಪೊಲೀಸ್ ವ್ಯಾನ್‌ಗೆ ಬೂಟು, ಚಪ್ಪಲಿ ಎಸೆದಿದ್ದರು ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ವಿದ್ಯಾನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಆನಂದ ವಣಕುದುರೆ, ಹದಿನೈದು ಮಂದಿ ವಿರುದ್ಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.