ADVERTISEMENT

ಪೌರತ್ವ ಕಾಯ್ದೆ ಬೆಂಬಲಿಸಿ ರಾಮನಗರದಲ್ಲಿ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2020, 6:32 IST
Last Updated 4 ಜನವರಿ 2020, 6:32 IST
ಪೌರತ್ವ ಕಾಯ್ದೆ ಬೆಂಬಲಿಸಿ  ರಾಷ್ಟ್ರೀಯ ಹಿತರಕ್ಷಣಾ ವೇದಿಕೆ ವತಿಯಿಂದ ರಾಮನಗರದಲ್ಲಿ ನಡೆಯುತ್ತಿರುವ ಮೆರವಣಿಗೆ
ಪೌರತ್ವ ಕಾಯ್ದೆ ಬೆಂಬಲಿಸಿ ರಾಷ್ಟ್ರೀಯ ಹಿತರಕ್ಷಣಾ ವೇದಿಕೆ ವತಿಯಿಂದ ರಾಮನಗರದಲ್ಲಿ ನಡೆಯುತ್ತಿರುವ ಮೆರವಣಿಗೆ    

ರಾಮನಗರ: ಪೌರತ್ವ ತಿದ್ದುಪಡಿ‌ ಕಾಯ್ದೆ ಬೆಂಬಲಿಸಿ ರಾಷ್ಟ್ರೀಯ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಬೃಹತ್ ಜಾಥಾ ನಡೆಯಿತು.

ಇಲ್ಲಿನ ಕೆಂಪೇಗೌಡ ವೃತ್ತದಲ್ಲಿ ಚಾಲನೆ ನೀಡಲಾಯಿತು. ಅಲ್ಲಿಂದ ಮೆರವಣಿಗೆಯು ಬಸ್ ನಿಲ್ದಾಣ, ಎಂ.ಜಿ. ರಸ್ತೆ ಮೂಲಕ ಜ್ಯೂನಿಯರ್ ಕಾಲೇಜು ಮೈದಾನದವರೆಗೆ ಸಾಗಿತು.

ಮೆರವಣಿಗೆ ಉದ್ದಕ್ಕೂ ಜನರು ರಾಷ್ಟ್ರ ಧ್ವಜ, ಓಂ ಲಾಂಛನವುಳ್ಳ‌ ಧ್ವಜಗಳನ್ನು ಹಿಡಿದು ಸಾಗಿದರು. ನಾಲ್ಕು ತಾಲ್ಲೂಕುಗಳ ಬಿಜೆಪಿ ಕಾರ್ಯಕರ್ತರು, ಆರ್ ಎಸ್ ಎಸ್, ಎಬಿವಿಪಿ, ಹಿಂದೂ‌ ಜಾಗರಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.