ADVERTISEMENT

ನಿಷೇಧ ಕಾಯ್ದೆಯಿಂದಲೇ ಮತಾಂತರ ತಪ್ಪಿಸಲು ಆಗುವುದಿಲ್ಲ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 20 ಜನವರಿ 2023, 22:54 IST
Last Updated 20 ಜನವರಿ 2023, 22:54 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಸುತ್ತೂರು (ಮೈಸೂರು ಜಿಲ್ಲೆ): ‘ಮತಾಂತರ ನಿಷೇಧ ಕಾಯ್ದೆಯಿಂದಲೇ ಮತಾಂತರ ತಪ್ಪಿಸಲು ಆಗುವುದಿಲ್ಲ. ಆಮಿಷಕ್ಕೆ ಒಳಗಾಗಿ ಮತಾಂತರಗೊಂಡವರನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತರುವ ಕೆಲಸವನ್ನು ಮಠಗಳು ಮಾಡಬೇಕು’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ‌.ಎಸ್.ಯಡಿಯೂರಪ್ಪ ಪ್ರತಿಪಾದಿಸಿದರು.

ಇಲ್ಲಿ ಶುಕ್ರವಾರ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ಮಠದ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ದಲಿತರು, ಅಶಕ್ತರು ಹಾಗೂ ನಿರಾಶ್ರಿತರನ್ನು ಮುಖ್ಯವಾಹಿನಿಗೆ ತರುವ ಕೆಲಸವನ್ನೂ ಮಠಗಳು ಮಾಡಬೇಕು. ಹೆಚ್ಚಾಗಿರುವ ಮತಾಂತರ ಪಿಡುಗನ್ನು ಕೊನೆಗಾಣಿಸಲು ಸಮಾಜ ಜಾಗೃತಗೊಳ್ಳಬೇಕು. ಮತಾಂತರದ ವಿರುದ್ಧ ಜಾಗೃತಿ ಮೂಡಿಸಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.