ADVERTISEMENT

ಸಂವಿಧಾನ ವಿರೋಧಿ ಕಾಯ್ದೆ ವಾಪಸ್ಸಿಗೆ ಆಗ್ರಹ

ಹೂವಿನಹಡಗಲಿಯಲ್ಲಿ ಸಿಎಎ, ಎನ್ಆರ್‌ಸಿ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2020, 21:24 IST
Last Updated 2 ಜನವರಿ 2020, 21:24 IST
ಹೂವಿನಹಡಗಲಿಯಲ್ಲಿ ಸಿಎಎ, ಎನ್‌ಆರ್‌ಸಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಿತು
ಹೂವಿನಹಡಗಲಿಯಲ್ಲಿ ಸಿಎಎ, ಎನ್‌ಆರ್‌ಸಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಿತು   

ಹೂವಿನಹಡಗಲಿ: ದೇಶದ ಮೂಲ ನಿವಾಸಿಗಳನ್ನು ಜನಾಂಗೀಯ ಆಧಾರದಲ್ಲಿ ವಿಭಜಿಸುವ ಸಂವಿಧಾನ ವಿರೋಧಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಮಾಜಿ ಶಾಸಕ ಶಿರಾಜ್ ಶೇಖ್‌ ಆಗ್ರಹಿಸಿದರು.

ಪಟ್ಟಣದಲ್ಲಿ ಗುರುವಾರ ಕೇಂದ್ರ ಸರ್ಕಾರದ ಸಿಎಎ ಮತ್ತು ಎನ್‌ಆರ್‌ಸಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆ ಗಳ ಒಕ್ಕೂಟ ಹಮ್ಮಿಕೊಂಡಿದ್ದ ಪ್ರತಿ ಭಟನಾ ರ‍್ಯಾಲಿಯಲ್ಲಿ ಮಾತನಾಡಿದರು.

‘ಸ್ವಾತಂತ್ರ್ಯಕ್ಕಾಗಿ ಮುಸ್ಲಿಮರು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದಾರೆ. 30 ಸಾವಿರಕ್ಕೂ ಹೆಚ್ಚು ಮುಸ್ಲಿಮರು ಹುತಾತ್ಮರಾಗಿದ್ದಾರೆ. ಸ್ವಾತಂತ್ರ್ಯ ಹೋರಾಟದ ಚರಿತ್ರೆ ಗೊತ್ತಿಲ್ಲದ ಮೋದಿ, ಅಮಿತ್ ಶಾ ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ, ಓಟಿಗಾಗಿ ವೈಷಮ್ಯ ಬಿತ್ತುತ್ತಿದ್ದಾರೆ ಎಂದು ಕಿಡಿ ಕಾರಿದರು.

ADVERTISEMENT

ಅಸ್ಸಾಂನಂಥ ಚಿಕ್ಕ ರಾಜ್ಯದಲ್ಲಿ 19 ಲಕ್ಷ ಜನರಿಗೆ ಪೌರತ್ವ ನೋಂದಣಿ ದಾಖಲೆ ಕೊಡಲು ಸಾಧ್ಯವಾಗಿಲ್ಲ. ಇದರಲ್ಲಿ ಮುಸ್ಲಿಮರು 4 ಲಕ್ಷ ಇದ್ದರೆ, 15 ಲಕ್ಷ ಜನ ಮುಸ್ಲಿಮೇತರರು ಇದ್ದಾರೆ. ಚಿಕ್ಕ ರಾಜ್ಯದ ನೋಂದಣಿ ಪ್ರಕ್ರಿಯೆಗೆ ₹1600 ಕೋಟಿ ಖರ್ಚಾಗಿದೆ. ಇಡೀ ದೇಶದ ನೋಂದಣಿಗೆ ₹55 ಸಾವಿರ ಕೋಟಿ ಬೇಕು. ದೇಶ ಆರ್ಥಿಕ ಸಂಕಷ್ಟದಲ್ಲಿರುವಾಗ ಇಷ್ಟೊಂದು ಹಣ ಖರ್ಚು ಮಾಡುವ ಈ ಕಾಯ್ದೆ ಯಾವ ಪುರುಷಾರ್ಥಕ್ಕೆ ಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.