ADVERTISEMENT

ಯೋಗೇಶ್ವರ್‌ಗೆ ಘೇರಾವ್‌

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2019, 14:08 IST
Last Updated 1 ಡಿಸೆಂಬರ್ 2019, 14:08 IST

ಹುಣಸೂರು (ಮೈಸೂರು): ಬಿಜೆಪಿ ಅಭ್ಯರ್ಥಿ ಎಚ್‌.ವಿಶ್ವನಾಥ್‌ ಪರ ಮತ ಯಾಚನೆಗೆ ತೆರಳಿದ್ದ, ಪಕ್ಷದ ಮುಖಂಡ ಸಿ.ಪಿ.ಯೋಗೇಶ್ವರ್‌ ಅವರನ್ನು ತಾಲ್ಲೂಕಿನ ಗ್ರಾಮಸ್ಥರು ಶುಕ್ರವಾರ ತರಾಟೆಗೆ ತೆಗೆದುಕೊಂಡಿದ್ದಾರೆ. ಹನಗೋಡು ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಯೋಗೇಶ್ವರ್‌ ಪ್ರಚಾರ ಕೈಗೊಂಡಿದ್ದರು.

ಹೆಗ್ಗಂದೂರು ಗ್ರಾಮಕ್ಕೆ ಬಂದಾಗ ಅವರನ್ನು ಸುತ್ತುವರಿದ ಕೆಲವರು, ‘ಗ್ರಾಮದೊಳಗೆ ಬರಬೇಡಿ. ನೀವು ಒಬ್ಬರೇ ಪ್ರಚಾರಕ್ಕೆ ಬಂದಿದ್ದೇಕೆ? ನಿಮ್ಮ ಅಭ್ಯರ್ಥಿ ವಿಶ್ವನಾಥ್‌ ಅವರನ್ನೂ ಕರೆದುಕೊಂಡು ಬನ್ನಿ. ಅವರನ್ನು ಪ್ರಶ್ನಿಸ ಬೇಕಿದೆ’ ಎಂದು ವಾಗ್ವಾದಕ್ಕಿಳಿದರು.

ಹೇಳಿಕೆಗೆ ಕ್ಷಮೆ ಕೋರಿದ ತಮ್ಮಣ್ಣ

ADVERTISEMENT

ಕೆ.ಆರ್‌.ಪೇಟೆ: ‘ಅನರ್ಹ ಶಾಸಕ ಕೆ.ಸಿ. ನಾರಾಯಣಗೌಡ ಗೆದ್ದರೆ ಕೆ.ಆರ್‌.ಪೇಟೆಯನ್ನು ಕಾಮಾಟಿಪುರ ಮಾಡುತ್ತಾರೆ’ ಎಂಬ ತಮ್ಮ ಹೇಳಿಕೆಗೆ ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಕ್ಷಮೆ ಯಾಚಿಸಿದ್ದಾರೆ.

ಅವರ ಹೇಳಿಕೆಗೆ ಮುಂಬೈನಲ್ಲಿ ನೆಲೆಸಿರುವ ಕೆ.ಆರ್‌.ಪೇಟೆ ಜನರು ವ್ಯಾಪಕವಾಗಿ ಅಸಮಾಧಾನ ವ್ಯಕ್ತ
ಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.