ADVERTISEMENT

ಹಲ್ಲೆ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಆಭರಣ ವ್ಯಾಪಾರಿ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2018, 18:06 IST
Last Updated 12 ನವೆಂಬರ್ 2018, 18:06 IST

ಬಳ್ಳಾರಿ: ‘ನಗರದ ರಾಜ್‌ಮಹಲ್‌ ಜ್ಯುವೆಲರ್ಸ್ ಮಾಲೀಕ ರಮೇಶ್ ಅವರ ಮೇಲೆ ಹಲ್ಲೆ ನಡೆಸಿರುವ ಸಿಸಿಬಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೇತೃತ್ವದಲ್ಲಿ ಚಿನ್ನಾಭರಣ ವರ್ತಕರು ನಗರದಲ್ಲಿ ಸೋಮವಾರ ಧರಣಿ ನಡೆಸಿದರು.

‘ಸಂಸ್ಥೆಯ ಸದಸ್ಯ, ಚಿನ್ನಾಭರಣ ವ್ಯಾಪಾರಿ ರಮೇಶ್ ಮೇಲೆ ಸಿಸಿಬಿ ಪೊಲೀಸರು ವಿಚಾರಣೆ ನೆಪದಲ್ಲಿ ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ. ಪ್ರಕರಣದಲ್ಲಿ ನಾವು ಮೂಗು ತೂರಿಸುವುದಿಲ್ಲ. ಈ ಪ್ರಕರಣ ಏನೆಂಬುದು ನಮಗೆ ಗೊತ್ತಿಲ್ಲ. ಆದರೆ, ಬಳ್ಳಾರಿಯ ವ್ಯಾಪಾರಿಯೊಬ್ಬರನ್ನು ಹಿಂಸಿಸಿರುವುದು ಖಂಡನೀಯ’ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಡಿ.ಎಲ್.ರಮೇಶ್‌ ಗೋಪಾಲ್‌ ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT