ಬೆಂಗಳೂರು: ಕನಿಷ್ಠ ವೇತನ ಬಿಡುಗಡೆಗೆ ಆಗ್ರಹಿಸಿ ಸೆ.22ರಂದು ವಿಧಾನಸೌಧ ಮುತ್ತಿಗೆ ಮತ್ತು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ಎಚ್.ಎನ್.ದೇವರಾಜ ತಿಳಿಸಿದ್ದಾರೆ.
ಗ್ರಾಮ ಸಹಾಯಕರ ಕನಿಷ್ಠ ವೇತನ ತಿಂಗಳಿಗೆ ₹21 ಸಾವಿರ ನಿಗದಿ ಮಾಡಬೇಕು. ಅಡ್ವೊಕೇಟ್ ಜನರಲ್ ವರದಿಯಂತೆ ಅವರನ್ನು ಡಿ ದರ್ಜೆ ನೌಕರರೆಂದು ಘೋಷಣೆ ಮಾಡಬೇಕು ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.